ಪಕ್ಷದೊಳಗಿನ ಆಂತರಿಕ ಸಂಘರ್ಷ ಮತ್ತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದೊಂದಿಗಿನ ಜಟಾಪಟಿಯ ನಡುವೆ ಬಿಜೆಪಿ, ಸೋಮವಾರ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷರಾಗಿದ್ದ ದೀಪಕ್ ಘೋಷ್ ಅವರನ್ನು ಬದಲಿಸಿ, ಆ ಜಾಗಕ್ಕೆ ಸಂಸದ ಸುಕಾಂತ ಮುಜಂದಾರ್ ಅವರನ್ನು ನೇಮಿಸಿದೆ. ದಿಲೀಪ್ ಘೋಷ್ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.