ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಹಣ ವಂಚನೆ ಆರೋಪದಡಿ ಚಿತ್ರ ನಿರ್ದೇಶಕ ಶ್ರೀಕುಮಾರ್‌ ಮೆನನ್ ಬಂಧನ

Last Updated 7 ಮೇ 2021, 14:48 IST
ಅಕ್ಷರ ಗಾತ್ರ

ಆಲಪ್ಪುಳ (ಕೇರಳ): ಉದ್ಯಮ ಸಮೂಹವೊಂದಕ್ಕೆ ₹5 ಕೋಟಿ ವಂಚಿಸಿದ ಆರೋಪದ ಮೇಲೆ ಮಲಯಾಳಂ ಸಿನಿಮಾರಂಗದ ಜನಪ್ರಿಯ ನಿರ್ದೇಶಕ ವಿ.ಎ. ಶ್ರೀಕುಮಾರ್‌ ಮೆನನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ರಾತ್ರಿ ಉತ್ತರ ಪಾಲಕ್ಕಾಡ್‌ ಜಿಲ್ಲೆಯಲ್ಲಿರುವ ಮೆನನ್‌ ಮನೆಯಲ್ಲಿಯೇ ಅವರನ್ನು ವಶಕ್ಕೆ ಪಡೆಯಲಾಗಿದೆ. ಐಪಿಸಿ ಸೆಕ್ಷನ್‌ 420(ಮೋಸ, ವಂಚನೆ) ಅಡಿ ಮೆನನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಚಲನಚಿತ್ರವನ್ನು ನಿರ್ಮಿಸುವ ನೆಪದಲ್ಲಿ ಕನಿಷ್ಠ ₹ ಐದು ಕೋಟಿ ವಂಚಿಸಿರುವುದಾಗಿ ಉದ್ಯಮ ಸಮೂಹ ಮೆನನ್‌ ದೂರು ನೀಡಿತ್ತು. ಈ ಸಂಬಂಧ, ಮೆನನ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT