ಈ ಕುರಿತು ಭಾನುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್ ಮತ್ತು ಸಂಜಯ್ ಧೋತ್ರೆ ಪಾಲ್ಗೊಂಡಿದ್ದರು. ಜತೆಗೆ, ರಾಜ್ಯಗಳು ಮತ್ತು ಕೇಂದ್ರಾಡಳಿ ಪ್ರದೇಶಗಳ ಶಿಕ್ಷಣ ಸಚಿವರು ಮತ್ತು ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು. 12ನೇ ತರಗತಿ ಜತೆ ತಾಂತ್ರಿಕ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋಸ್ಗಳಿಗೆ ನಡೆಸಬೇಕಿರುವ ಪ್ರವೇಶ ಪರೀಕ್ಷೆಗಳ ಕುರಿತು ಚರ್ಚಿಸಲಾಯಿತು. ಮಕ್ಕಳ ಮೇಲೆ ಕೋವಿಡ್–19 ಸಾಂಕ್ರಾಮಿಕದ ದುಷ್ಪರಿಣಾಮಗಳನ್ನು ಗಮನದಲ್ಲಿರಿಸಿಕೊಂಡು ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಭೆ ನಿರ್ಧರಿಸಿದೆ.