ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಳಿಯ’ನ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರ ಈ ಮೊದಲು ಇತ್ತು: ನಿರ್ಮಲಾ ತಿರುಗೇಟು

Last Updated 12 ಫೆಬ್ರುವರಿ 2021, 16:58 IST
ಅಕ್ಷರ ಗಾತ್ರ

ನವದೆಹಲಿ: ‘ಅಳಿಯನ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿದ್ದ ಸರ್ಕಾರ ಈ ಹಿಂದೆ ಇತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂಥದ್ದನ್ನು ಪ್ರೋತ್ಸಾಹಿಸುವುದಿಲ್ಲ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕಾಂಗ್ರೆಸ್‌ಗೆ ಶುಕ್ರವಾರ ತಿರುಗೇಟು ನೀಡಿದರು.

ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಿಜೆಪಿಗೆ ಆಪ್ತರಾಗಿರುವ ಬಂಡವಾಳಶಾಹಿಗಳ ಪರವಾಗಿ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂಬ ಕಾಂಗ್ರೆಸ್‌ನ ಟೀಕೆಯನ್ನು ಅವರು ತೀವ್ರವಾಗಿ ಖಂಡಿಸಿದರು.

‘ಸರ್ಕಾರ ಬಡವರ ಪರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಕೋವಿಡ್‌ ಪಿಡುಗು ವ್ಯಾಪಿಸಿದ್ದ ಸಂಕಷ್ಟದ ಸಮಯದಲ್ಲಿಯೂ ಕೇಂದ್ರ ಸರ್ಕಾರ ಬಡವರಿಗೆ ನೆರವು ನೀಡಿದೆ. ಇವೆಲ್ಲ ವಿರೋಧ ಪಕ್ಷಗಳಿಗೆ ಕಾಣಿಸುವುದಿಲ್ಲ. ಸರ್ಕಾರದ ಬಗ್ಗೆ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುವುದರಲ್ಲಿಯೇ ಅವು ನಿರತವಾಗಿವೆ’ ಎಂದೂ ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT