ನವದೆಹಲಿ: ಕೋವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ ಹಣಕಾಸಿನ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ ಇದಕ್ಕಾಗಿ ಹಣಕಾಸಿನ ಮಿತಿಗಳು ಮತ್ತು ಇತರ ಕಾರಣಗಳನ್ನು ಮುಂದಿಟ್ಟಿದೆ.
ಕೋವಿಡ್ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ₹4 ಲಕ್ಷ ಪರಿಹಾರ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಯಾಗಿ ಕೇಂದ್ರ ಈ ಅಫಿಡವಿಟ್ ಸಲ್ಲಿಸಿದೆ.
ಕೇಂದ್ರ ಸರ್ಕಾರವು ಈಗಾಗಲೇ ಅರ್ಥಿಕ ನೆರವು ನೀಡಿದೆ. ಅಲ್ಲದೆ, ಅಗತ್ಯವಿರುವವರಿಗೆ ಪರಿಹಾರ ಒದಗಿಸಿದೆ. ರಾಜ್ಯ ಸರ್ಕಾರಗಳೂ ಪರಿಹಾರಗಳನ್ನು ನೀಡಿದೆ ಹೀಗಾಗಿ ಆರ್ಥಿಕ ಹೊರೆ ಸೃಷ್ಟಿಯಾಗಿದೆ ಎಂದೂ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.