‘ಅಂತಿಮ ಸಂಸ್ಕಾರದ ವೇಳೆ ಕುಟುಂಬ ಸದಸ್ಯರು ಮೃತದೇಹದ ಮೇಲೆ ರಾಷ್ಟ್ರಧ್ವಜವನ್ನು ಹೊದಿಸಿದ್ದ, ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾರತ ಧ್ವಜ ಸಂಹಿತೆ ಪ್ರಕಾರ ತ್ರಿವರ್ಣ ಧ್ವಜವನ್ನು ನಾಗರಿಕರ ಅಂತ್ಯಕ್ರಿಯೆಯಲ್ಲಿ ಬಳಸುವುದು ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ಘಟನೆ ಬಳಿಕ ಮೃತ ರೈತ ಬಲ್ಜೀಂದ್ರ ಅವರ ತಾಯಿ ಜಸ್ವೀರ್ ಕೌರ್ ಹಾಗೂ ಸಹೋದರ ಗುರ್ವೀಂದರ್, ಮತ್ತೊಬ್ಬ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಾಶ್ ಅವರು ತಿಳಿಸಿದ್ದಾರೆ.