ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾಳಿಚರಣ್, 'ರಾಜಕೀಯದ ಮೂಲಕ ರಾಷ್ಟ್ರವನ್ನು ವಶಪಡಿಸಿಕೊಳ್ಳುವುದು ಇಸ್ಲಾಂನ ಗುರಿಯಾಗಿದೆ. ನಮ್ಮ ಮುಂದೆಯೇ ಅವರು 1947 ರಲ್ಲಿ (ವಿಭಜನೆಯನ್ನು ಉಲ್ಲೇಖಿಸಿ) ದೇಶಗಳನ್ನು ವಶಪಡಿಸಿಕೊಂಡರು. ಅವರು ಮೊದಲು ಇರಾನ್, ಇರಾಕ್ ಮತ್ತು ಅಫ್ಗಾನಿಸ್ತಾನವನ್ನು ವಶಪಡಿಸಿಕೊಂಡರು. ಬಳಿಕ ಅವರು ರಾಜಕೀಯದ ಮೂಲಕವೇ ಬಾಂಗ್ಲಾದೇಶ ಮತ್ತು ಪಾಕಿಸ್ತಾನವನ್ನು ವಶಪಡಿಸಿಕೊಂಡರು. ಗಾಂಧಿಯನ್ನು ಕೊಂದ ನಾಥೂರಾಂ ಗೋಡ್ಸೆಗೆ ನಾನು ನಮಸ್ಕರಿಸುತ್ತೇನೆ' ಎಂದಿದ್ದರು.