<p><strong>ನವದೆಹಲಿ: </strong>ಬಾಲಿವುಡ್ ನಟಿ ರಿಯಾ ಚಕ್ರವರ್ತಿ ದೂರಿನ ಮೇರೆಗೆ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಮತ್ತು ಇತರರ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿರುವ ಎಫ್ಐಆರ್ ಕಾನೂನುಬಾಹಿರವಾಗಿದೆ ಎಂದು ಸುಶಾಂತ್ ತಂದೆ ಪರ ವಕೀಲ ವಿಕಾಸ್ ಸಿಂಗ್ ಅವರು ಮಂಗಳವಾರ ಆರೋಪಿಸಿದ್ದಾರೆ.</p>.<p>ರಜಪೂತ್ ಸಹೋದರಿ ಪ್ರಿಯಾಂಕಾ ಸಿಂಗ್ ಮತ್ತು ದೆಹಲಿ ಮೂಲದ ವೈದ್ಯರು ಖಿನ್ನತೆಗೆ ಸಂಬಂಧಿಸಿದ ನಕಲಿಪ್ರಿಸ್ಕ್ರಿಪ್ಶನ್ ಸೂಚಿಸಿದ್ದಾರೆ ಎಂದು ಆರೋಪಿಸಿ ರಿಯಾ ಚಕ್ರವರ್ತಿ ಬಾದ್ರಾ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದರು.</p>.<p>‘ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಪ್ರಕರಣವನ್ನು ಸಿಬಿಐ, ಇಡಿ ಮತ್ತು ಎನ್ಸಿಬಿ ತನಿಖೆ ನಡೆಸುತ್ತಿದೆ. ಹೀಗಿರುವಾಗ ತನಿಖೆಯ ದಾರಿ ತಪ್ಪಿಸಲು ಆರೋಪಿ ಈ ರೀತಿಯ ದೂರುಗಳನ್ನು ನೀಡಿದ್ದಾರೆ. ರಿಯಾ ಚಕ್ರವರ್ತಿ ದೂರಿನ ರದ್ದತಿ ಕೋರಿ ನ್ಯಾಯಲದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದು ವಿಕಾಸ್ ಅವರು ತಿಳಿಸಿದರು.</p>.<p>‘ಬಾದ್ರಾ ಪೊಲೀಸ್ ಠಾಣೆಯು ರಿಯಾ ಚಕ್ರವರ್ತಿಯ ಎರಡನೇ ಮನೆಯಾಗಿದೆ. ಪ್ರಿಯಾಂಕಾ ಸಿಂಗ್ ವಿರುದ್ಧ ದಾಖಲಿಸಿರುವ ಎಫ್ಐಆರ್ ಕಾನೂನು ಬಾಹಿರ ಮತ್ತು ಸುಪ್ರೀಂಕೋರ್ಟಿನ ಆದೇಶದ ಉಲ್ಲಂಘನೆಯಾಗಿದೆ’ ಎಂದು ಅವರು ಆರೋಪಿಸಿದ್ದಾರೆ.</p>.<p>‘ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಮಾತ್ರ ದಾಖಲಿಸಬಹುದು. ಅಲ್ಲದೇ ವೈದ್ಯರ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ ವೈದ್ಯಕೀಯ ತಂಡದೊಂದಿಗೆ ಚರ್ಚೆ ನಡೆಸಬೇಕು’ ಎಂದು ಸುಪ್ರೀಂಕೋರ್ಟ್ ಹೇಳಿತ್ತು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಬಾಲಿವುಡ್ ನಟಿ ರಿಯಾ ಚಕ್ರವರ್ತಿ ದೂರಿನ ಮೇರೆಗೆ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಮತ್ತು ಇತರರ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿರುವ ಎಫ್ಐಆರ್ ಕಾನೂನುಬಾಹಿರವಾಗಿದೆ ಎಂದು ಸುಶಾಂತ್ ತಂದೆ ಪರ ವಕೀಲ ವಿಕಾಸ್ ಸಿಂಗ್ ಅವರು ಮಂಗಳವಾರ ಆರೋಪಿಸಿದ್ದಾರೆ.</p>.<p>ರಜಪೂತ್ ಸಹೋದರಿ ಪ್ರಿಯಾಂಕಾ ಸಿಂಗ್ ಮತ್ತು ದೆಹಲಿ ಮೂಲದ ವೈದ್ಯರು ಖಿನ್ನತೆಗೆ ಸಂಬಂಧಿಸಿದ ನಕಲಿಪ್ರಿಸ್ಕ್ರಿಪ್ಶನ್ ಸೂಚಿಸಿದ್ದಾರೆ ಎಂದು ಆರೋಪಿಸಿ ರಿಯಾ ಚಕ್ರವರ್ತಿ ಬಾದ್ರಾ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದರು.</p>.<p>‘ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಪ್ರಕರಣವನ್ನು ಸಿಬಿಐ, ಇಡಿ ಮತ್ತು ಎನ್ಸಿಬಿ ತನಿಖೆ ನಡೆಸುತ್ತಿದೆ. ಹೀಗಿರುವಾಗ ತನಿಖೆಯ ದಾರಿ ತಪ್ಪಿಸಲು ಆರೋಪಿ ಈ ರೀತಿಯ ದೂರುಗಳನ್ನು ನೀಡಿದ್ದಾರೆ. ರಿಯಾ ಚಕ್ರವರ್ತಿ ದೂರಿನ ರದ್ದತಿ ಕೋರಿ ನ್ಯಾಯಲದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದು ವಿಕಾಸ್ ಅವರು ತಿಳಿಸಿದರು.</p>.<p>‘ಬಾದ್ರಾ ಪೊಲೀಸ್ ಠಾಣೆಯು ರಿಯಾ ಚಕ್ರವರ್ತಿಯ ಎರಡನೇ ಮನೆಯಾಗಿದೆ. ಪ್ರಿಯಾಂಕಾ ಸಿಂಗ್ ವಿರುದ್ಧ ದಾಖಲಿಸಿರುವ ಎಫ್ಐಆರ್ ಕಾನೂನು ಬಾಹಿರ ಮತ್ತು ಸುಪ್ರೀಂಕೋರ್ಟಿನ ಆದೇಶದ ಉಲ್ಲಂಘನೆಯಾಗಿದೆ’ ಎಂದು ಅವರು ಆರೋಪಿಸಿದ್ದಾರೆ.</p>.<p>‘ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಮಾತ್ರ ದಾಖಲಿಸಬಹುದು. ಅಲ್ಲದೇ ವೈದ್ಯರ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ ವೈದ್ಯಕೀಯ ತಂಡದೊಂದಿಗೆ ಚರ್ಚೆ ನಡೆಸಬೇಕು’ ಎಂದು ಸುಪ್ರೀಂಕೋರ್ಟ್ ಹೇಳಿತ್ತು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>