<p><strong>ಮುಂಬೈ: </strong>ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಹೊಸ ಎಫ್ಐಆರ್ ದಾಖಲಿಸಲಾಗಿದೆ.</p>.<p>ಪೊಲೀಸರ ತಂಡ ಬೆಳಿಗ್ಗೆ ಮುಂಬೈನಲ್ಲಿರುವ ಅರ್ನಬ್ ಅವರ ನಿವಾಸ ಪ್ರವೇಶಿಸಿದ್ದಾಗ ಈ ಘಟಕ ನಡೆದಿರುವುದಾಗಿ ವರದಿಯಾಗಿದೆ. ಮಹಾರಾಷ್ಟ್ರ ಪೊಲೀಸರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಅರ್ನಬ್ ಸಹ ಆರೋಪಿಸಿದ್ದಾರೆ.</p>.<p>ಅರ್ನಬ್ ಮತ್ತು ಅವರ ಕುಟುಂಬದ ಕೆಲವು ಸದಸ್ಯರ ಮೇಲೂ ಮುಂಬೈನ ಎನ್.ಎಂ.ಜೋಶಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 504 ಮತ್ತು 506 ಹಾಗೂ ಸಾರ್ವಜನಿಕ ಆಸ್ತಿ ಹಾನಿ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.</p>.<p>2018ರಲ್ಲಿ ಒಳಾಂಗಣ ವಿನ್ಯಾಸಗಾರ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.</p>.<p>ಬಂಧನದ ಬಳಿಕ ಮುಂಬೈ ಕೋರ್ಟ್ನಲ್ಲಿ ಅರ್ನಬ್ ಅವರನ್ನು ಹಾಜರಿ ಪಡಿಸಲಾಯಿತು. ಅವರ ಮೇಲೆ ಪೊಲೀಸ್ ಅಧಿಕಾರಿಗಳಿಬ್ಬರು ಹಲ್ಲೆ ಮಾಡಿರುವುದಾಗಿ ಅರ್ನಬ್ ಪರ ವಕೀಲ ಆರೋಪಿಸಿದರು.</p>.<p>ಮಹಾರಾಷ್ಟ್ರ ಪೊಲೀಸರ ಕ್ರಮವನ್ನು ಕೇಂದ್ರ ಸರ್ಕಾರದ ಬಿಜೆಪಿ ಮುಖಂಡರು, ಸಚಿವರು ವಿರೋಧಿಸಿದ್ದು, ಮಹಾರಾಷ್ಟ್ರ ಸರ್ಕಾರ ಅಧಿಕಾರದ ದುರುಪಯೋಗ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.</p>.<p>ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಅನ್ವಯ್ ನಾಯಕ್ ಅವರ ಪತ್ನಿ ಅಕ್ಷಿತಾ ನಾಯಕ್, 'ಇಂಥದ್ದೊಂದು ದಿನವನ್ನು ನನ್ನ ಜೀವನದಲ್ಲಿ ತಂದಿದ್ದಕ್ಕೆ ಮಹಾರಾಷ್ಟ್ರ ಪೊಲೀಸರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ' ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಹೊಸ ಎಫ್ಐಆರ್ ದಾಖಲಿಸಲಾಗಿದೆ.</p>.<p>ಪೊಲೀಸರ ತಂಡ ಬೆಳಿಗ್ಗೆ ಮುಂಬೈನಲ್ಲಿರುವ ಅರ್ನಬ್ ಅವರ ನಿವಾಸ ಪ್ರವೇಶಿಸಿದ್ದಾಗ ಈ ಘಟಕ ನಡೆದಿರುವುದಾಗಿ ವರದಿಯಾಗಿದೆ. ಮಹಾರಾಷ್ಟ್ರ ಪೊಲೀಸರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಅರ್ನಬ್ ಸಹ ಆರೋಪಿಸಿದ್ದಾರೆ.</p>.<p>ಅರ್ನಬ್ ಮತ್ತು ಅವರ ಕುಟುಂಬದ ಕೆಲವು ಸದಸ್ಯರ ಮೇಲೂ ಮುಂಬೈನ ಎನ್.ಎಂ.ಜೋಶಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 504 ಮತ್ತು 506 ಹಾಗೂ ಸಾರ್ವಜನಿಕ ಆಸ್ತಿ ಹಾನಿ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.</p>.<p>2018ರಲ್ಲಿ ಒಳಾಂಗಣ ವಿನ್ಯಾಸಗಾರ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.</p>.<p>ಬಂಧನದ ಬಳಿಕ ಮುಂಬೈ ಕೋರ್ಟ್ನಲ್ಲಿ ಅರ್ನಬ್ ಅವರನ್ನು ಹಾಜರಿ ಪಡಿಸಲಾಯಿತು. ಅವರ ಮೇಲೆ ಪೊಲೀಸ್ ಅಧಿಕಾರಿಗಳಿಬ್ಬರು ಹಲ್ಲೆ ಮಾಡಿರುವುದಾಗಿ ಅರ್ನಬ್ ಪರ ವಕೀಲ ಆರೋಪಿಸಿದರು.</p>.<p>ಮಹಾರಾಷ್ಟ್ರ ಪೊಲೀಸರ ಕ್ರಮವನ್ನು ಕೇಂದ್ರ ಸರ್ಕಾರದ ಬಿಜೆಪಿ ಮುಖಂಡರು, ಸಚಿವರು ವಿರೋಧಿಸಿದ್ದು, ಮಹಾರಾಷ್ಟ್ರ ಸರ್ಕಾರ ಅಧಿಕಾರದ ದುರುಪಯೋಗ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.</p>.<p>ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಅನ್ವಯ್ ನಾಯಕ್ ಅವರ ಪತ್ನಿ ಅಕ್ಷಿತಾ ನಾಯಕ್, 'ಇಂಥದ್ದೊಂದು ದಿನವನ್ನು ನನ್ನ ಜೀವನದಲ್ಲಿ ತಂದಿದ್ದಕ್ಕೆ ಮಹಾರಾಷ್ಟ್ರ ಪೊಲೀಸರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ' ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>