ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಂಡಾರ ಆಸ್ಪತ್ರೆ ದುರಂತ: ಸಂತ್ರಸ್ತರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ

Last Updated 9 ಜನವರಿ 2021, 7:08 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಭಂಡಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತದಲ್ಲಿ 10 ನವಜಾತ ಶಿಶುಗಳು ಮೃತಪಟ್ಟಿವೆ. ಇದರಲ್ಲಿ ಮೂರು ಶಿಶುಗಳು ಸುಟ್ಟ ಗಾಯ ಮತ್ತು ಏಳು ಮಕ್ಕಳು ಹೊಗೆಯಿಂದಾಗಿ ಉಸಿರುಗಟ್ಟಿ ಸಾವಿಗೀಡಾಗಿವೆ. ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್‌ ಟೊಪೆ ಅವರು ತಿಳಿಸಿದರು.

ಮೃತಪಟ್ಟ ಮಗುವಿನ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.

‘ಶುಕ್ರವಾರ ಮಧ್ಯರಾತ್ರಿಯ ಬಳಿಕ 1.30ರ ಸುಮಾರಿಗೆ ನವಜಾತ ಶಿಶುಗಳ ತೀವ್ರ ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿದ್ದ 17 ಮಕ್ಕಳಲ್ಲಿ ಏಳು ಶಿಶುಗಳನ್ನು ಆಸ್ಪತ್ರೆ ಸಿಬ್ಬಂದಿ ರಕ್ಷಿಸಿದ್ದಾರೆ. ಈ ಅವಘಡಕ್ಕೆ ಕಾರಣರಾದವರನ್ನು ಪತ್ತೆ ಹಚ್ಚುತ್ತೇವೆ. ಈಗಾಗಲೇ ತನಿಖೆಗಾಗಿ ಆದೇಶಿಸಲಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಗಮನವಿಡುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT