ಈ ವಿಧ್ವಂಸಕ ಕೃತ್ಯದ ಹಿಂದೆ ಯಾರದ್ದೋ ಕೈವಾಡವಿರಬಹುದೇ ಎಂದು ಕೊಲ್ಹಾಪುರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪವರ್ ‘ಇದೊಂದು ಆಕಸ್ಮಿಕ ಘಟನೆ. ಈ ಬಗ್ಗೆ ಮಾತನಾಡಲು ಇದು ಸಮಯವಲ್ಲ. ಆದರೆ ಸಿರಂ ಸಂಸ್ಥೆಯಲ್ಲಿ ಕೆಲಸ ಮಾಡುವ ತಜ್ಞರು, ವಿಜ್ಞಾನಿಗಳ ಸಮಗ್ರತೆಯ ಬಗ್ಗೆ ನಮಗೆ ಯಾವುದೇ ಸಂದೇಹವಿಲ್ಲ. ಇದೊಂದು ಅಪಘಾತ‘ ಎಂದರು.