ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊಳ್ಳೆ ಬತ್ತಿಯ ಕಿಡಿಯಿಂದ ಹೊತ್ತಿಕೊಂಡ ಬೆಂಕಿ: 6 ಮಂದಿ ಸಾವು

Last Updated 31 ಮಾರ್ಚ್ 2023, 9:25 IST
ಅಕ್ಷರ ಗಾತ್ರ

ನವದೆಹಲಿ: ಸೊಳ್ಳೆ ಬತ್ತಿಯ ಕಿಡಿಯಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ವಿಷಕಾರಿ ಹೊಗೆಯಿಂದ ಉಸಿರುಗಟ್ಟಿ ಮಗು ಸೇರಿದಂತೆ ಆರು ಜನರು ಸಾವಿಗೀಡಾಗಿರುವ ದುರಂತ ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್‌ನ ಮನೆಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಇನ್ನೂ ಮೂವರು ಮೃತಪಟ್ಟಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಶಾಸ್ತ್ರಿ ಪಾರ್ಕ್‌ನ ಮಚ್ಚಿ ಮಾರುಕಟ್ಟೆಯ ಮಜರ್ ವಾಲಾ ರಸ್ತೆಯ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಿಗ್ಗೆ 9 ಗಂಟೆಗೆ ಪೊಲೀಸರಿಗೆ ಮಾಹಿತಿ ಬಂದಿದೆ ಎಂದು ಡಿಸಿಪಿ ಜಾಯ್ ಟಿರ್ಕಿ ಹೇಳಿದ್ದಾರೆ.

ಪೊಲೀಸರು ಸ್ಥಳಕ್ಕೆ ತೆರಳುವ ಹೊತ್ತಿಗೆ 9 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಪೈಕಿ ನಾಲ್ವರು ಪುರುಷರು, ಒಬ್ಬ ಮಹಿಳೆ, ಒಂದೂವರೆ ವರ್ಷದ ಮಗು ಮೃತಪಟ್ಟಿದೆ. ಗಾಯಗೊಂಡಿರುವ 15 ವರ್ಷದ ಬಾಲಕಿ, 45 ವರ್ಷದ ಮಹಿಳೆಗೆ ಚಿಕಿತ್ಸೆ ನಡೆಯುತ್ತಿದೆ.

ಪೊಲೀಸರ ಪ್ರಕಾರ, ರಾತ್ರಿ ಸೊಳ್ಳೆ ಓಡಿಸಲು ಹಚ್ಚಿದ್ದ ಸೊಳ್ಳೆ ಬತ್ತಿ ಹಾಸಿಗೆಯ ಮೇಲೆ ಬಿದ್ದು ಬೆಂಕಿ ಹೊತ್ತಿಕೊಂಡಿದೆ. ವಿಷಕಾರಿ ಹೊಗೆಯಿಂದಾಗಿ ಮನೆಯ ಸದಸ್ಯರು ಪ್ರಜ್ಞೆ ಕಳೆದುಕೊಂಡಿದ್ದಾರೆ. ಬಳಿಕ, ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT