ಈ ಬಗ್ಗೆ ಮಾತನಾಡಿರುವ ಮುಂಬೈ ಉಪನಗರ ಅಭಿವೃದ್ಧಿ ಸಚಿವ ಆದಿತ್ಯ ಠಾಕ್ರೆ, 'ಪಶ್ಚಿಮ ಬಾಂದ್ರಾದಲ್ಲಿರುವ 21 ಅಂತಸ್ತಿನ ಕಟ್ಟಡದ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ವರದಿಯಾಗಿದೆ. ಅಗ್ನಿ ಶಾಮಕ ದಳ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಬಿಎಂಸಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಯಾವುದೇ ಸಾವಿನ ವರದಿಯಾಗಿಲ್ಲ. ಕಟ್ಟಡದ ಆವರಣದಲ್ಲಿರುವ ನಿವಾಸಿಗಳ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.