<p class="title"><strong>ಸಿಲಿಗುರಿ (ಪಶ್ಚಿಮ ಬಂಗಾಳ): </strong>ಪಶ್ಚಿಮ ಬಂಗಾಳದ ಸಿಲಿಗುರಿ ನಗರದ ಕೊಳೆಗೇರಿಯೊಂದರಲ್ಲಿ ಶನಿವಾರ ರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, 12 ಜನರು ಗಾಯಗೊಂಡಿದ್ದಾರೆ, ಸುಮಾರು 50 ಮನೆಗಳು ಹಾನಿಗೀಡಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಸುಮಾರು 2,000 ಜನರು ನೆಲೆಸಿರುವರಾಣಾ ಬಸ್ತಿ ಪ್ರದೇಶದಲ್ಲಿ ಶನಿವಾರ ರಾತ್ರಿ 8 ಗಂಟೆಗೆ ಬೆಂಕಿ ಹೊತ್ತುಕೊಂಡಿತು. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದರು. ಬೆಂಕಿಗೀಡಾದ ಮನೆಗಳ ನಿವಾಸಿಗಳನ್ನು ತಾತ್ಕಾಲಿಕ ವಸತಿಗಳಿಗೆ ಸ್ಥಳಾಂತರಿಸಲಾಗಿದೆ. ಅವರಿಗೆ ಆಹಾರ ಮತ್ತು ವಸ್ತ್ರಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.</p>.<p class="bodytext">ಗಾಯಗೊಂಡವರಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ, ಒಂದು ಮಗು ಸೇರಿ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ಇತರರಿಗೆ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ಇನ್ನಷ್ಟೇ ತಿಳಿಯಬೇಕಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕೆಲ ಮನೆಗಳಲ್ಲಿ ಅನಿಲ ಸಿಲಿಂಡರ್ಗಳು ಸ್ಫೋಟಗೊಂಡವು. ಇದರಿಂದಾಗಿ ಬೆಂಕಿ ವೇಗವಾಗಿ ಹರಡಿತು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಸಿಲಿಗುರಿ (ಪಶ್ಚಿಮ ಬಂಗಾಳ): </strong>ಪಶ್ಚಿಮ ಬಂಗಾಳದ ಸಿಲಿಗುರಿ ನಗರದ ಕೊಳೆಗೇರಿಯೊಂದರಲ್ಲಿ ಶನಿವಾರ ರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, 12 ಜನರು ಗಾಯಗೊಂಡಿದ್ದಾರೆ, ಸುಮಾರು 50 ಮನೆಗಳು ಹಾನಿಗೀಡಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಸುಮಾರು 2,000 ಜನರು ನೆಲೆಸಿರುವರಾಣಾ ಬಸ್ತಿ ಪ್ರದೇಶದಲ್ಲಿ ಶನಿವಾರ ರಾತ್ರಿ 8 ಗಂಟೆಗೆ ಬೆಂಕಿ ಹೊತ್ತುಕೊಂಡಿತು. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದರು. ಬೆಂಕಿಗೀಡಾದ ಮನೆಗಳ ನಿವಾಸಿಗಳನ್ನು ತಾತ್ಕಾಲಿಕ ವಸತಿಗಳಿಗೆ ಸ್ಥಳಾಂತರಿಸಲಾಗಿದೆ. ಅವರಿಗೆ ಆಹಾರ ಮತ್ತು ವಸ್ತ್ರಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.</p>.<p class="bodytext">ಗಾಯಗೊಂಡವರಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ, ಒಂದು ಮಗು ಸೇರಿ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ಇತರರಿಗೆ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ಇನ್ನಷ್ಟೇ ತಿಳಿಯಬೇಕಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕೆಲ ಮನೆಗಳಲ್ಲಿ ಅನಿಲ ಸಿಲಿಂಡರ್ಗಳು ಸ್ಫೋಟಗೊಂಡವು. ಇದರಿಂದಾಗಿ ಬೆಂಕಿ ವೇಗವಾಗಿ ಹರಡಿತು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>