<p><strong>ನವದೆಹಲಿ (ಪಿಟಿಐ):</strong> ಪಟಾಕಿಗಳ ಮೇಲೆ ವಿಧಿಸಿರುವ ನಿರ್ಬಂಧವನ್ನು ಪರಿಗಣಿಸುವಾಗ ಉದ್ಯೋಗದ ಹೆಸರಿನಲ್ಲಿ ಬೇರೆಯವರ ಜೀವನದ ಹಕ್ಕು ಉಲ್ಲಂಘನೆಗೆ ಅವಕಾಶ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p class="bodytext">ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್.ಬೋಪಣ್ಣ ಅವರಿದ್ದ ಪೀಠವು, ‘ಅಮಾಯಕ ಜನರ ಜೀವನದ ಹಕ್ಕು ರಕ್ಷಿಸುವುದೇ ನಮ್ಮ ಆದ್ಯತೆ‘ ಎಂದು ಸ್ಪಷ್ಟಪಡಿಸಿತು.</p>.<p>ಉದ್ಯೋಗ, ನಿರುದ್ಯೋಗ ಹಾಗೂ ಜನರ ಜೀವನದ ಹಕ್ಕು ನಡುವೆ ನಾವು ನಿರ್ಧರಿಸಬೇಕಾಗಿದೆ. ಉದ್ಯೋಗದ ಹೆಸರಿನಲ್ಲಿ ಇತರೆ ನಾಗರಿಕರ ಹಕ್ಕಿನ ಉಲ್ಲಂಘನೆಯಾಗಬಾರದು ಎಂದು ಪೀಠ ಹೇಳಿತು.</p>.<p>‘ಸಂಬಂಧಿತ ಕಾನೂನುಗಳಿವೆ. ಆದರೆ, ಅದನ್ನು ಸಕಾಲದಲ್ಲಿ ಅನುಷ್ಠಾನಗೊಳಿಸದಿರುವುದೂ ಇದೆ. ನಮ್ಮ ಆದೇಶವನ್ನು ಅದರ ಪೂರ್ಣ ಸಾರದೊಂದಿಗೆ ಜಾರಿಗೊಳಿಸಬೇಕು‘ ಎಂದು ಪೀಠವು ಸ್ಪಷ್ಟಪಡಿಸಿತು.</p>.<p>ಪಟಾಕಿ ತಯಾರಕರ ಸಂಘವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಆತ್ಮಾರಾಂ ನಾಡಕರ್ಣಿ, ದೀಪಾವಳಿ ಹಬ್ಬ ಹತ್ತಿರವಾಗುತ್ತಿದ್ದು, ಪೆಟ್ರೋಲಿಯಂ ಮತ್ತು ಎಕ್ಸ್ಪ್ಲೋಸಿವ್ ಸುರಕ್ಷತಾ ಸಂಸ್ಥೆ (ಪಿಇಎಸ್ಒ) ತೀರ್ಮಾನಿಸಬೇಕು ಎಂದರು. ಸಾವಿರಾರು ಜನರು ನಿರುದ್ಯೋಗಿಗಳಾಗಲಿದ್ದು, ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಗೋಪಾಲ ಶಂಕರನಾರಾಯಣನ್ ಅವರು, ಸುಪ್ರೀಂ ಕೋರ್ಟ್ ಈ ಕುರಿತು ವಿವಿಧ ಆದೇಶ ನೀಡಿದೆ. ಸುರಕ್ಷಿತ ಎನ್ನುವಂತಹ ತೀರ್ಮಾನವನ್ನು ಪಿಇಎಸ್ಒ ಕೈಗೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಪಟಾಕಿಗಳ ಮೇಲೆ ವಿಧಿಸಿರುವ ನಿರ್ಬಂಧವನ್ನು ಪರಿಗಣಿಸುವಾಗ ಉದ್ಯೋಗದ ಹೆಸರಿನಲ್ಲಿ ಬೇರೆಯವರ ಜೀವನದ ಹಕ್ಕು ಉಲ್ಲಂಘನೆಗೆ ಅವಕಾಶ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p class="bodytext">ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್.ಬೋಪಣ್ಣ ಅವರಿದ್ದ ಪೀಠವು, ‘ಅಮಾಯಕ ಜನರ ಜೀವನದ ಹಕ್ಕು ರಕ್ಷಿಸುವುದೇ ನಮ್ಮ ಆದ್ಯತೆ‘ ಎಂದು ಸ್ಪಷ್ಟಪಡಿಸಿತು.</p>.<p>ಉದ್ಯೋಗ, ನಿರುದ್ಯೋಗ ಹಾಗೂ ಜನರ ಜೀವನದ ಹಕ್ಕು ನಡುವೆ ನಾವು ನಿರ್ಧರಿಸಬೇಕಾಗಿದೆ. ಉದ್ಯೋಗದ ಹೆಸರಿನಲ್ಲಿ ಇತರೆ ನಾಗರಿಕರ ಹಕ್ಕಿನ ಉಲ್ಲಂಘನೆಯಾಗಬಾರದು ಎಂದು ಪೀಠ ಹೇಳಿತು.</p>.<p>‘ಸಂಬಂಧಿತ ಕಾನೂನುಗಳಿವೆ. ಆದರೆ, ಅದನ್ನು ಸಕಾಲದಲ್ಲಿ ಅನುಷ್ಠಾನಗೊಳಿಸದಿರುವುದೂ ಇದೆ. ನಮ್ಮ ಆದೇಶವನ್ನು ಅದರ ಪೂರ್ಣ ಸಾರದೊಂದಿಗೆ ಜಾರಿಗೊಳಿಸಬೇಕು‘ ಎಂದು ಪೀಠವು ಸ್ಪಷ್ಟಪಡಿಸಿತು.</p>.<p>ಪಟಾಕಿ ತಯಾರಕರ ಸಂಘವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಆತ್ಮಾರಾಂ ನಾಡಕರ್ಣಿ, ದೀಪಾವಳಿ ಹಬ್ಬ ಹತ್ತಿರವಾಗುತ್ತಿದ್ದು, ಪೆಟ್ರೋಲಿಯಂ ಮತ್ತು ಎಕ್ಸ್ಪ್ಲೋಸಿವ್ ಸುರಕ್ಷತಾ ಸಂಸ್ಥೆ (ಪಿಇಎಸ್ಒ) ತೀರ್ಮಾನಿಸಬೇಕು ಎಂದರು. ಸಾವಿರಾರು ಜನರು ನಿರುದ್ಯೋಗಿಗಳಾಗಲಿದ್ದು, ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಗೋಪಾಲ ಶಂಕರನಾರಾಯಣನ್ ಅವರು, ಸುಪ್ರೀಂ ಕೋರ್ಟ್ ಈ ಕುರಿತು ವಿವಿಧ ಆದೇಶ ನೀಡಿದೆ. ಸುರಕ್ಷಿತ ಎನ್ನುವಂತಹ ತೀರ್ಮಾನವನ್ನು ಪಿಇಎಸ್ಒ ಕೈಗೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>