ದುರ್ಗಾ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಕೆಲವು ಸಮಾಜಘಾತುಕರು ಕಲ್ಲು ತೂರಾಟ ಮಾಡಿದ್ದು, 20 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಇದಾದ ಬಳಿಕ ಗುಂಪಿನಲ್ಲಿದ್ದವರು ಯಾರೋ ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಮುಂಗೆರ್ನ ಎಸ್ಪಿ ಲಿಪಿ ಸಿಂಗ್ ತಿಳಿಸಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.