<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಾಜೌರಿಯ ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿರುವ ಉಗ್ರರ ಪತ್ತೆಗೆ ನಡೆಯುತ್ತಿರುವ ಕಾರ್ಯಾಚರಣೆ 15ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಭಾರಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ʼಭಟ್ಟಿ ದುರೈನ್ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಉಗ್ರರು ಮತ್ತೆ ಮುಖಾಮುಖಿಯಾಗಿ ಗುಂಡಿನ ದಾಳಿನಡೆಸಲಾಗಿದೆಯೇ ಎಂಬುದು ಸದ್ಯ ಸ್ಪಷ್ಟವಾಗಿಲ್ಲ.ಉಗ್ರರು ದಟ್ಟಾರಣ್ಯದಲ್ಲಿನ ಗುಹೆಗಳಲ್ಲಿ ತಲೆ ಮರೆಸಿಕೊಂಡಿರುವ ಸಾಧ್ಯತೆ ಇದೆʼ ಎಂದು ಹೇಳಿದ್ದಾರೆ.</p>.<p>ಅಕ್ಟೋಬರ್11ರಂದು ಕಾರ್ಯಾಚರಣೆ ಆರಂಭವಾದಾಗಿನಿಂದಅಧಿಕಾರಿಗಳಿಬ್ಬರು ಸೇರಿದಂತೆ ಭಾರತೀಯ ಸೇನೆಯ 9 ಸಿಬ್ಬಂದಿ ಹುತಾತ್ಮರಾಗಿದ್ದಾರೆ.ಪಾಕಿಸ್ತಾನ ಮೂಲದ ಬಂಧಿತ ಉಗ್ರನೊಬ್ಬನೂ ಮೃತಪಟ್ಟಿದ್ದಾನೆ.</p>.<p>ಪೂಂಚ್ನ ಸುರನ್ಕೋಟ್ ಅರಣ್ಯದಲ್ಲಿ ನಡೆದ ಮೊದಲ ದಿನದ ಕಾರ್ಯಾಚರಣೆ ವೇಳೆ ಐವರು ಮತ್ತು ಮೆಂಧಾರ್ನ ಭಟ್ಟಿ ದುರೈನ್ನಲ್ಲಿಅಕ್ಟೋಬರ್ 14ರಂದು ನಡೆದ ಕಾರ್ಯಾಚರಣೆ ವೇಳೆ ನಾಲ್ವರು ಯೋಧರು ಮೃತಪಟ್ಟಿದ್ದಾರೆ.</p>.<p>ಕಾರ್ಯಾಚರಣೆ ವೇಳೆ ನಡೆದಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಉಗ್ರನನ್ನು ವಿಚಾರಣೆ ಸಲುವಾಗಿ ಜಮ್ಮುವಿನ ಕೋಟ್ ಭಲ್ವಾಲ್ ಸೆಂಟ್ರಲ್ ಜೈಲಿನಿಂದ ಮೆಂಧಾರ್ ಪೊಲೀಸ್ ರಿಮ್ಯಾಂಡ್ಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾನೆ.</p>.<p>ಸುರನ್ಕೋಟ್ ಮತ್ತು ಮೆಂಧಾರ್ಜೊತೆಗೆ ರಾಜೌರಿ ಜಿಲ್ಲೆಯ ಥಾನಮಂಡಿ ಅರಣ್ಯದಲ್ಲಿಯೂ ಕಾರ್ಯಾಚರಣೆ ಮುಂದುವರಿದಿದೆ.ಉಗ್ರರು ತಪ್ಪಿಸಿಕೊಳ್ಳದಂತೆಖಚಿತಪಡಿಸಿಕೊಳ್ಳಲು ಡ್ರೋಣ್ ಕಣ್ಗಾವಲು ಇಡಲಾಗಿದೆ.</p>.<p>ಉಗ್ರರಿಗೆ ಆಹಾರ, ಆಶ್ರಯಸೇರಿದಂತೆ ವ್ಯವಸ್ಥಿತ ನೆರವು ನೀಡಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿ ಒಟ್ಟು ಹನ್ನೆರಡು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/massive-search-operation-underway-to-neutralise-hiding-terrorists-in-jammu-and-kashmirs-poonch-and-874974.html " target="_blank">ರಾಜೌರಿ, ಪೂಂಚ್ನ ದಟ್ಟಾರಣ್ಯದಲ್ಲಿ ಅಡಗಿರುವ ಉಗ್ರರ ಬೇಟೆಗೆ ಭಾರೀ ಕಾರ್ಯಾಚರಣೆ </a></p>.<p>ಕಾರ್ಯಾಚರಣೆ ಹಿನ್ನಲೆಯಲ್ಲಿಮುನ್ನೆಚ್ಚರಿಕೆಯಾಗಿಮೆಂಧಾರ್ ಮತ್ತು ಥಾನಮಂಡಿ ನಡುವಿನ ಜಮ್ಮು-ರಾಜೌರಿ ಹೆದ್ದಾರಿಯಲ್ಲಿ ಹತ್ತನೇ ದಿನವೂ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.</p>.<p>ಜಮ್ಮು ಪ್ರದೇಶದ ರಾಜೌರಿ ಮತ್ತು ಪೂಂಚ್,ಈ ವರ್ಷದ ಜೂನ್ನಿಂದ ಅತಿ ಹೆಚ್ಚು ನುಸುಳುವಿಕೆ ಪ್ರಕರಣಗಳಿಗೆ ಸಾಕ್ಷಿಯಾಗಿವೆ. ಇದರ ಪರಿಣಾಮವಾಗಿ ನಡೆದ ಪ್ರತ್ಯೇಕ ಎನ್ಕೌಂಟರ್ನಲ್ಲಿ 9 ಉಗ್ರರು ಹತ್ಯೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಾಜೌರಿಯ ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿರುವ ಉಗ್ರರ ಪತ್ತೆಗೆ ನಡೆಯುತ್ತಿರುವ ಕಾರ್ಯಾಚರಣೆ 15ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಭಾರಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ʼಭಟ್ಟಿ ದುರೈನ್ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಉಗ್ರರು ಮತ್ತೆ ಮುಖಾಮುಖಿಯಾಗಿ ಗುಂಡಿನ ದಾಳಿನಡೆಸಲಾಗಿದೆಯೇ ಎಂಬುದು ಸದ್ಯ ಸ್ಪಷ್ಟವಾಗಿಲ್ಲ.ಉಗ್ರರು ದಟ್ಟಾರಣ್ಯದಲ್ಲಿನ ಗುಹೆಗಳಲ್ಲಿ ತಲೆ ಮರೆಸಿಕೊಂಡಿರುವ ಸಾಧ್ಯತೆ ಇದೆʼ ಎಂದು ಹೇಳಿದ್ದಾರೆ.</p>.<p>ಅಕ್ಟೋಬರ್11ರಂದು ಕಾರ್ಯಾಚರಣೆ ಆರಂಭವಾದಾಗಿನಿಂದಅಧಿಕಾರಿಗಳಿಬ್ಬರು ಸೇರಿದಂತೆ ಭಾರತೀಯ ಸೇನೆಯ 9 ಸಿಬ್ಬಂದಿ ಹುತಾತ್ಮರಾಗಿದ್ದಾರೆ.ಪಾಕಿಸ್ತಾನ ಮೂಲದ ಬಂಧಿತ ಉಗ್ರನೊಬ್ಬನೂ ಮೃತಪಟ್ಟಿದ್ದಾನೆ.</p>.<p>ಪೂಂಚ್ನ ಸುರನ್ಕೋಟ್ ಅರಣ್ಯದಲ್ಲಿ ನಡೆದ ಮೊದಲ ದಿನದ ಕಾರ್ಯಾಚರಣೆ ವೇಳೆ ಐವರು ಮತ್ತು ಮೆಂಧಾರ್ನ ಭಟ್ಟಿ ದುರೈನ್ನಲ್ಲಿಅಕ್ಟೋಬರ್ 14ರಂದು ನಡೆದ ಕಾರ್ಯಾಚರಣೆ ವೇಳೆ ನಾಲ್ವರು ಯೋಧರು ಮೃತಪಟ್ಟಿದ್ದಾರೆ.</p>.<p>ಕಾರ್ಯಾಚರಣೆ ವೇಳೆ ನಡೆದಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಉಗ್ರನನ್ನು ವಿಚಾರಣೆ ಸಲುವಾಗಿ ಜಮ್ಮುವಿನ ಕೋಟ್ ಭಲ್ವಾಲ್ ಸೆಂಟ್ರಲ್ ಜೈಲಿನಿಂದ ಮೆಂಧಾರ್ ಪೊಲೀಸ್ ರಿಮ್ಯಾಂಡ್ಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾನೆ.</p>.<p>ಸುರನ್ಕೋಟ್ ಮತ್ತು ಮೆಂಧಾರ್ಜೊತೆಗೆ ರಾಜೌರಿ ಜಿಲ್ಲೆಯ ಥಾನಮಂಡಿ ಅರಣ್ಯದಲ್ಲಿಯೂ ಕಾರ್ಯಾಚರಣೆ ಮುಂದುವರಿದಿದೆ.ಉಗ್ರರು ತಪ್ಪಿಸಿಕೊಳ್ಳದಂತೆಖಚಿತಪಡಿಸಿಕೊಳ್ಳಲು ಡ್ರೋಣ್ ಕಣ್ಗಾವಲು ಇಡಲಾಗಿದೆ.</p>.<p>ಉಗ್ರರಿಗೆ ಆಹಾರ, ಆಶ್ರಯಸೇರಿದಂತೆ ವ್ಯವಸ್ಥಿತ ನೆರವು ನೀಡಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿ ಒಟ್ಟು ಹನ್ನೆರಡು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/massive-search-operation-underway-to-neutralise-hiding-terrorists-in-jammu-and-kashmirs-poonch-and-874974.html " target="_blank">ರಾಜೌರಿ, ಪೂಂಚ್ನ ದಟ್ಟಾರಣ್ಯದಲ್ಲಿ ಅಡಗಿರುವ ಉಗ್ರರ ಬೇಟೆಗೆ ಭಾರೀ ಕಾರ್ಯಾಚರಣೆ </a></p>.<p>ಕಾರ್ಯಾಚರಣೆ ಹಿನ್ನಲೆಯಲ್ಲಿಮುನ್ನೆಚ್ಚರಿಕೆಯಾಗಿಮೆಂಧಾರ್ ಮತ್ತು ಥಾನಮಂಡಿ ನಡುವಿನ ಜಮ್ಮು-ರಾಜೌರಿ ಹೆದ್ದಾರಿಯಲ್ಲಿ ಹತ್ತನೇ ದಿನವೂ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.</p>.<p>ಜಮ್ಮು ಪ್ರದೇಶದ ರಾಜೌರಿ ಮತ್ತು ಪೂಂಚ್,ಈ ವರ್ಷದ ಜೂನ್ನಿಂದ ಅತಿ ಹೆಚ್ಚು ನುಸುಳುವಿಕೆ ಪ್ರಕರಣಗಳಿಗೆ ಸಾಕ್ಷಿಯಾಗಿವೆ. ಇದರ ಪರಿಣಾಮವಾಗಿ ನಡೆದ ಪ್ರತ್ಯೇಕ ಎನ್ಕೌಂಟರ್ನಲ್ಲಿ 9 ಉಗ್ರರು ಹತ್ಯೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>