‘ಈಗಾಗಲೇ180 ಮಂದಿ ಸ್ವಯಂ ಪ್ರೇರಿತವಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಸಂಶೋಧನಾ ವಿಭಾಗದ ಮುಖ್ಯಸ್ಥ ಸೌರಭ್ ಅಗರವಾಲ್ ಅವರು ಯಾರಿಗೆ ಎಷ್ಟು ಪ್ರಮಾಣದ ಲಸಿಕೆ ನೀಡಬೇಕೆಂಬುದನ್ನು ನಿರ್ಧರಿಸಲಿದ್ದಾರೆ. ಒಬ್ಬರಿಗೆ ಒಂದು ಡೋಸ್ ನೀಡಿ ಅವರ ಮೇಲೆ ನಿಗಾ ಇಡಲಾಗುತ್ತದೆ. ಅವಶ್ಯವಿದ್ದವರಿಗೆ ಮತ್ತೆ ಲಸಿಕೆ ಕೊಡಲಾಗುತ್ತದೆ. ರೋಗಿಗಳ ಪರಿಸ್ಥಿತಿಯನ್ನು ನಿಯಮಿತವಾಗಿ ಪರಿಶೀಲಿಸಲಾಗುತ್ತದೆ. ಸಂಗ್ರಹಿಸಿದ ದತ್ತಾಂಶಗಳಿಂದ ಲಸಿಕೆಯು ಯಶಸ್ವಿಯಾಗಿದೆಯೇ ಇಲ್ಲವೇ ಎಂಬುದನ್ನು ನಿರ್ಧರಿಸಲಾಗುತ್ತದೆ’ ಎಂದು ಅವರು ನುಡಿದಿದ್ದಾರೆ.