ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷದ ಮೊದಲ ಚಂಡಮಾರುತ ‘ತೌಕ್ತೆ’ ಆತಂಕ

Last Updated 11 ಮೇ 2021, 16:26 IST
ಅಕ್ಷರ ಗಾತ್ರ

ಮುಂಬೈ: ಈ ವರ್ಷದ ಮೊದಲ ಚಂಡಮಾರುತ ಒಂದೆರಡು ದಿನಗಳಲ್ಲಿ ಮಹಾರಾಷ್ಡ್ರ–ಗೋವಾ ಕರಾವಳಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿಯುವ ಪರಿಣಾಮ ಚಂಡಮಾರುತ ಸೃಷ್ಟಿಯಾಗಲಿದೆ ಎಂದು ಇಲಾಖೆ ಹೇಳಿದೆ.

ಈ ಚಂಡಮಾರುತಕ್ಕೆ ‘ತೌಕ್ತೆ’ ಎಂದು ಹೆಸರಿಸಲಾಗಿದೆ. ಇದು ಮ್ಯಾನ್ಮಾರ್‌ ಭಾಷೆ ಪದವಾಗಿದ್ದು, ‘ಹಲ್ಲಿ’ ಎಂದರ್ಥ.

‘ಇದೇ 14ರಂದು ವಾಯುಭಾರ ಕುಸಿಯುವ ಸಂಭವ ಇದ್ದು, ಕ್ರಮೇಣ ಚಂಡಮಾರುತವಾಗಿ ಪರಿವರ್ತನೆಗೊಂಡು, ಮೇ 16ರ ವೇಳೆಗೆ ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಅಪ್ಪಳಿಸಲಿದೆ’ ಎಂದು ಇಲಾಖೆ ಟ್ವೀಟ್‌ ಮಾಡಿದೆ.

ಮೀನುಗಾರರು ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಬಾರದು ಎಂದೂ ಇಲಾಖೆ ಸಲಹೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT