ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ರಾತ್ರಿ ವೇಳೆಯ ವಿಮಾನ ಹಾರಾಟ ಯಶಸ್ವಿ

Last Updated 20 ಮಾರ್ಚ್ 2021, 4:56 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ ವೇಳೆಯ ವಿಮಾನ ಹಾರಾಟ ಯಶಸ್ವಿಯಾಗಿದೆ ಎಂದು ವಿಮಾನಯಾನ ಸಂಸ್ಥೆ ಶನಿವಾರ ತಿಳಿಸಿದೆ.

ಶೇಖ್ ಆಲಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಗೋಏರ್ ವಿಮಾನ ದೆಹಲಿಗೆ ಯಶಸ್ವಿಯಾಗಿ ಹಾರಾಟ ನಡೆಸಿತು. ಇದು ರಾತ್ರಿ ವೇಳೆಯ ಮೊದಲ ವಿಮಾನ ಹಾರಾಟ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋಏರ್ ವಿಮಾನ ರಾತ್ರಿ 7.15 ಕ್ಕೆ ಇಲ್ಲಿಂದ ದೇಶದ ರಾಜಧಾನಿ ನವದೆಹಲಿಗೆ ತೆರಳಿತು. ಈ ವೇಳೆ ಕೈಗಾರಿಕೆ ಮತ್ತು ವಾಣಿಜ್ಯ ಪ್ರಧಾನ ಕಾರ್ಯದರ್ಶಿ ರಂಜನ್ ಪ್ರಕಾಶ್ ಠಾಕೂರ್ ವಿಮಾನದ ಸಿಬ್ಬಂದಿಗೆ ಶುಭ ಕೋರಿದರು.

ಕೆಲವು ತಿಂಗಳುಗಳಿಂದ ಭದ್ರತೆ ಹಾಗೂ ಪ್ರತಿಕೂಲ ಹವಾಮಾನದ ಕಾರಣ ರಾತ್ರಿ ಸಮಯದಲ್ಲಿ ವಿಮಾನ ಹಾರಟವನ್ನು ನಿಷೇಧಿಸಲಾಗಿತ್ತು. ವಿಮಾನಯಾನ ನಿರ್ದೇಶನಾಲಯದ ಅಂತಿಮ ಅನುಮೋದನೆಯ ಬಳಿಕ ವಿಮಾನಗಳು ರಾತ್ರಿ ವೇಳೆಯಲ್ಲಿ ಹಾರಾಟ ನಡೆಸುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT