ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ತಲುಪಿದ ‘ಆಕ್ಸಿಜನ್ ಎಕ್ಸ್‌ಪ್ರೆಸ್’ ರೈಲು

Last Updated 23 ಏಪ್ರಿಲ್ 2021, 16:29 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ರೈಲ್ವೆಯ ಆಕ್ಸಿಜನ್‌ ಎಕ್ಸ್‌ಪ್ರೆಸ್‌ ರೈಲು ಏಳು ಟ್ಯಾಂಕರ್‌ಗಳಲ್ಲಿ ಆಮ್ಲಜನಕ ಹೊತ್ತುಕೊಂಡು ಶುಕ್ರವಾರ ಸಂಜೆ ಮಹಾರಾಷ್ಟ್ರವನ್ನು ತಲುಪಿತು.

ಗುರುವಾರ ತಡರಾತ್ರಿ ವಿಶಾಖಪಟ್ಟಣದಿಂದ ಹೊರಟ ಆಕ್ಸಿಜನ್‌ ಎಕ್ಸ್‌ಪ್ರೆಸ್‌ ರೈಲು, ಶುಕ್ರವಾರ ಸಂಜೆ ಮಹಾರಾಷ್ಟ್ರದ ನಾಗಪುರವನ್ನು ತಲುಪಿತು. ಇಲ್ಲಿ ಮೂರು ಟ್ಯಾಂಕರ್‌ ಆಕ್ಸಿಜನ್‌ ಇಳಿಸಲಾಗುವುದು, ಉಳಿದ ನಾಲ್ಕು ಟ್ಯಾಂಕರ್‌ ಅನ್ನು ಮುಂಬೈಗೆ ತರಲಾಗುವುದು ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರೈಲ್ವೆ ಇಲಾಖೆ ದೇಶದ ನಾಗರಿಕರ ಯೋಗಕ್ಷೇಮವನ್ನು ಕಾಪಾಡುವ ನಿಟ್ಟಿನಲ್ಲಿ ಕಷ್ಟದ ಸಂದರ್ಭದಲ್ಲಿ ಎಲ್ಲಾ ಅಗತ್ಯ ಸರಕುಗಳನ್ನು ಸಾಗಿಸುವ ಮೂಲಕ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದೆ ಎಂದು ಗೋಯಲ್‌ ಟ್ವೀಟ್‌ ಮಾಡಿದ್ದರು.

ಆಕ್ಸಿಜನ್‌ ಟ್ಯಾಂಕರ್‌ಗಳನ್ನು ಸಾಗಿಸುವ ಸೌಕರ್ಯಗಳ ವೆಚ್ಚವನ್ನು ಭಾರತೀಯ ಸೇನೆ ಭರಿಸಿದ್ದು, ರೈಲ್ವೆ ಇಲಾಖೆ ನಿರ್ವಹಣೆ ಮಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT