ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರಪ್ರದೇಶ: ರೈಲು ಅಪಘಾತದಲ್ಲಿ ಐವರು ಪ್ರಯಾಣಿಕರ ಸಾವು

Last Updated 12 ಏಪ್ರಿಲ್ 2022, 5:38 IST
ಅಕ್ಷರ ಗಾತ್ರ

ಹೈದರಾಬಾದ್‌:ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ಕೊನಾರ್ಕ್‌ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಸಂತ್ರಸ್ತರು ಕೊಯಮತ್ತೂರು–ಸಿಲ್ಚಾರ್‌ ಎಕ್ಸ್‌ಪ್ರೆಸ್‌ ರೈಲಿನಿಂದ ಸಿಗಡಮ್‌–ಚಿಪುರುಪಲ್ಲಿ ನಿಲ್ದಾಣಗಳ ನಡುವೆ ಇಳಿದು ಪಕ್ಕದ ಹಳಿಯತ್ತ ಓಡಲು ಪ್ರಯತ್ನಿಸಿದರು. ಆಗ ವೇಗವಾಗಿ ಬಂದ ಭುವನೇಶ್ವರ–ಮುಂಬೈ ಕೊನಾರ್ಕ್‌ ರೈಲಿಗೆ ಸಿಲುಕಿದರು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.

ವಿಶಾಖಪಟ್ಟಣ-ಪಲಾಸ ಮುಖ್ಯ ಮಾರ್ಗದ ಮಧ್ಯಭಾಗದಲ್ಲಿ ಘಟನೆ ನಡೆದಿದೆ. ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT