<p><strong>ನವದೆಹಲಿ:</strong> ಶಾಲಾ ಶಿಕ್ಷಣದ ಗುಣಮಟ್ಟ ಗುರುತಿಸುವ ‘ಕಾರ್ಯಕ್ಷಮತೆ ಶ್ರೇಣಿಕೃತ ಸೂಚ್ಯಂಕ’ದಲ್ಲಿ (ಪಿಜಿಐ) ಪಂಜಾಬ್, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಕೇರಳ ಎ++ ಪಡೆದಿವೆ.</p>.<p>ಶಿಕ್ಷಣ ಸಚಿವಾಲಯ 2019–20ನೇ ಸಾಲಿನ ಪಿಜಿಐ ವರದಿಯನ್ನು ಭಾನುವಾರ ಬಿಡುಗಡೆ ಮಾಡಿದೆ. 70 ಮಾನದಂಡಗಳ ಆಧಾರದ ಮೇಲೆ ಶ್ರೇಣಿಕೃತ ಸೂಚ್ಯಂಕ ನೀಡಲಾಗಿದೆ.</p>.<p>ಕರ್ನಾಟಕದ ಶಿಕ್ಷಣ ಗುಣಮಟ್ಟ ಹಿಂದಿನ ವರ್ಷಗಳಿಗೆ ಹೋಲಿಸಿದಾಗ ಅಲ್ಪಮಟ್ಟಿಗೆ ಸುಧಾರಣೆ ಕಂಡಿದ್ದು, ‘ಎ’ ಸೂಚ್ಯಂಕ ಪಡೆದಿದೆ. ಅಂದರೆ, ಗ್ರೇಡ್ 1ರಲ್ಲಿದೆ.</p>.<p><strong>ಓದಿ:</strong><a href="https://www.prajavani.net/india-news/delhi-govt-hospital-bars-nurses-from-talking-in-malayalam-at-work-union-fumes-836434.html" itemprop="url">ದೆಹಲಿ ಸರ್ಕಾರಿ ಆಸ್ಪತ್ರೆಯಲ್ಲಿ ಮಲಯಾಳಂನಲ್ಲಿ ಮಾತನಾಡದಂತೆ ದಾದಿಯರಿಗೆ ಆದೇಶ</a></p>.<p>ದೆಹಲಿ, ಗುಜರಾತ್, ಹರಿಯಾಣ, ರಾಜಸ್ಥಾನ, ಪುದುಚೇರಿ, ದಾದ್ರಾ ಮತ್ತು ನಗರ ಹವೇಲಿ ಎ+ ವಿಭಾಗದಲ್ಲಿ ಸ್ಥಾನ ಪಡೆದಿವೆ.</p>.<p>ಆಡಳಿತ ಮತ್ತು ನಿರ್ವಹಣೆಯಲ್ಲಿ ಪಂಜಾಬ್ ಗರಿಷ್ಠ ಅಂಕಗಳನ್ನು ಪಡೆದಿದೆ. ಮೂಲಸೌಕರ್ಯಗಳು ಮತ್ತು ಸೌಲಭ್ಯಗಳ ವಿಷಯದಲ್ಲಿ ಬಿಹಾರ ಮತ್ತು ಮೇಘಾಲಯ ಅತಿ ಕಡಿಮೆ ಅಂಕಗಳನ್ನು ಪಡೆದಿವೆ.</p>.<p>13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮೂಲಸೌಕರ್ಯಗಳು ಮತ್ತು ಇತರ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಶೇಕಡ 10ರಷ್ಟು ಸುಧಾರಣೆಯಾಗಿವೆ. ಅದರಲ್ಲೂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಒಡಿಶಾ ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ಮಹತ್ವದ ಸುಧಾರಣೆ ಕ್ರಮಗಳನ್ನು ಕೈಗೊಂಡಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆಡಳಿತ ಪ್ರಕ್ರಿಯೆಯಲ್ಲಿ ಶೇಕಡ 10ರಷ್ಟು ಮಾತ್ರ ಸುಧಾರಣೆ ಕ್ರಮಗಳನ್ನು ಕೈಗೊಂಡಿವೆ ಎಂದು ತಿಳಿಸಿದೆ.</p>.<p><strong>ಓದಿ:</strong><a href="https://www.prajavani.net/karnataka-news/minister-suresh-kumar-said-that-only-cet-score-should-be-considered-for-admission-to-the-836229.html" itemprop="url">ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣಿಸಿ: ಸುರೇಶ್ ಕುಮಾರ್</a></p>.<p>‘ಶಿಕ್ಷಕರು, ಪ್ರಾಂಶುಪಾಲರು ಮತ್ತು ಆಡಳಿತ ಸಿಬ್ಬಂದಿ ಕೊರತೆ, ನಿಯಮಿತವಾಗಿ ಶಾಲೆಗಳ ತಪಾಸಣೆ ಮಾಡದಿರುವುದು, ಸಕಾಲಕ್ಕೆ ಹಣಕಾಸು ಲಭ್ಯವಾಗದಿರುವುದು ಸೇರಿದಂತೆ ಹಲವು ಸಮಸ್ಯೆಗಳಿಂದ ದೇಶದ ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಅಡ್ಡಿಯಾಗಿವೆ’ ಎಂದು ವರದಿಯಲ್ಲಿ ವಿಶ್ಲೇಷಿಸಲಾಗಿದೆ.</p>.<p>’ಸೂಚ್ಯಂಕದ ಆಧಾರದ ಮೇಲೆ ಕೊರತೆಗಳನ್ನು ವಸ್ತುನಿಷ್ಠವಾಗಿ ಮತ್ತು ನಿಯಮಿತವಾಗಿ ಪರಿಶೀಲಿಸಿ ನಿವಾರಿಸಿಕೊಳ್ಳಬಹುದು. ಜತೆಗೆ ಯಾವ ವಲಯಕ್ಕೆ ಆದ್ಯತೆ ನೀಡಬೇಕು ಎನ್ನುವುದು ಸಹ ರಾಜ್ಯಗಳಿಗೆ ತಿಳಿಯಲಿದೆ’ ಎಂದು ಸಲಹೆ ನೀಡಲಾಗಿದೆ.</p>.<p>ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಬಹುತೇಕ ರಾಜ್ಯಗಳು ಸೂಚ್ಯಂಕದಲ್ಲಿ ಸುಧಾರಣೆ ಕಂಡಿವೆ.</p>.<p>ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಿಜಿಐ ಅನ್ನು ಮೊದಲ ಬಾರಿ 2019ರಲ್ಲಿ ಬಿಡುಗಡೆ ಮಾಡಲಾಗಿತ್ತು. 2017–18ನೇ ಶೈಕ್ಷಣಿಕ ವರ್ಷವನ್ನು ಆಧಾರವಾಗಿಟ್ಟುಕೊಂಡು ಈ ಪಿಜಿಐ ವರದಿ ಬಿಡುಗಡೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಶಾಲಾ ಶಿಕ್ಷಣದ ಗುಣಮಟ್ಟ ಗುರುತಿಸುವ ‘ಕಾರ್ಯಕ್ಷಮತೆ ಶ್ರೇಣಿಕೃತ ಸೂಚ್ಯಂಕ’ದಲ್ಲಿ (ಪಿಜಿಐ) ಪಂಜಾಬ್, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಕೇರಳ ಎ++ ಪಡೆದಿವೆ.</p>.<p>ಶಿಕ್ಷಣ ಸಚಿವಾಲಯ 2019–20ನೇ ಸಾಲಿನ ಪಿಜಿಐ ವರದಿಯನ್ನು ಭಾನುವಾರ ಬಿಡುಗಡೆ ಮಾಡಿದೆ. 70 ಮಾನದಂಡಗಳ ಆಧಾರದ ಮೇಲೆ ಶ್ರೇಣಿಕೃತ ಸೂಚ್ಯಂಕ ನೀಡಲಾಗಿದೆ.</p>.<p>ಕರ್ನಾಟಕದ ಶಿಕ್ಷಣ ಗುಣಮಟ್ಟ ಹಿಂದಿನ ವರ್ಷಗಳಿಗೆ ಹೋಲಿಸಿದಾಗ ಅಲ್ಪಮಟ್ಟಿಗೆ ಸುಧಾರಣೆ ಕಂಡಿದ್ದು, ‘ಎ’ ಸೂಚ್ಯಂಕ ಪಡೆದಿದೆ. ಅಂದರೆ, ಗ್ರೇಡ್ 1ರಲ್ಲಿದೆ.</p>.<p><strong>ಓದಿ:</strong><a href="https://www.prajavani.net/india-news/delhi-govt-hospital-bars-nurses-from-talking-in-malayalam-at-work-union-fumes-836434.html" itemprop="url">ದೆಹಲಿ ಸರ್ಕಾರಿ ಆಸ್ಪತ್ರೆಯಲ್ಲಿ ಮಲಯಾಳಂನಲ್ಲಿ ಮಾತನಾಡದಂತೆ ದಾದಿಯರಿಗೆ ಆದೇಶ</a></p>.<p>ದೆಹಲಿ, ಗುಜರಾತ್, ಹರಿಯಾಣ, ರಾಜಸ್ಥಾನ, ಪುದುಚೇರಿ, ದಾದ್ರಾ ಮತ್ತು ನಗರ ಹವೇಲಿ ಎ+ ವಿಭಾಗದಲ್ಲಿ ಸ್ಥಾನ ಪಡೆದಿವೆ.</p>.<p>ಆಡಳಿತ ಮತ್ತು ನಿರ್ವಹಣೆಯಲ್ಲಿ ಪಂಜಾಬ್ ಗರಿಷ್ಠ ಅಂಕಗಳನ್ನು ಪಡೆದಿದೆ. ಮೂಲಸೌಕರ್ಯಗಳು ಮತ್ತು ಸೌಲಭ್ಯಗಳ ವಿಷಯದಲ್ಲಿ ಬಿಹಾರ ಮತ್ತು ಮೇಘಾಲಯ ಅತಿ ಕಡಿಮೆ ಅಂಕಗಳನ್ನು ಪಡೆದಿವೆ.</p>.<p>13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮೂಲಸೌಕರ್ಯಗಳು ಮತ್ತು ಇತರ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಶೇಕಡ 10ರಷ್ಟು ಸುಧಾರಣೆಯಾಗಿವೆ. ಅದರಲ್ಲೂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಒಡಿಶಾ ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ಮಹತ್ವದ ಸುಧಾರಣೆ ಕ್ರಮಗಳನ್ನು ಕೈಗೊಂಡಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆಡಳಿತ ಪ್ರಕ್ರಿಯೆಯಲ್ಲಿ ಶೇಕಡ 10ರಷ್ಟು ಮಾತ್ರ ಸುಧಾರಣೆ ಕ್ರಮಗಳನ್ನು ಕೈಗೊಂಡಿವೆ ಎಂದು ತಿಳಿಸಿದೆ.</p>.<p><strong>ಓದಿ:</strong><a href="https://www.prajavani.net/karnataka-news/minister-suresh-kumar-said-that-only-cet-score-should-be-considered-for-admission-to-the-836229.html" itemprop="url">ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣಿಸಿ: ಸುರೇಶ್ ಕುಮಾರ್</a></p>.<p>‘ಶಿಕ್ಷಕರು, ಪ್ರಾಂಶುಪಾಲರು ಮತ್ತು ಆಡಳಿತ ಸಿಬ್ಬಂದಿ ಕೊರತೆ, ನಿಯಮಿತವಾಗಿ ಶಾಲೆಗಳ ತಪಾಸಣೆ ಮಾಡದಿರುವುದು, ಸಕಾಲಕ್ಕೆ ಹಣಕಾಸು ಲಭ್ಯವಾಗದಿರುವುದು ಸೇರಿದಂತೆ ಹಲವು ಸಮಸ್ಯೆಗಳಿಂದ ದೇಶದ ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಅಡ್ಡಿಯಾಗಿವೆ’ ಎಂದು ವರದಿಯಲ್ಲಿ ವಿಶ್ಲೇಷಿಸಲಾಗಿದೆ.</p>.<p>’ಸೂಚ್ಯಂಕದ ಆಧಾರದ ಮೇಲೆ ಕೊರತೆಗಳನ್ನು ವಸ್ತುನಿಷ್ಠವಾಗಿ ಮತ್ತು ನಿಯಮಿತವಾಗಿ ಪರಿಶೀಲಿಸಿ ನಿವಾರಿಸಿಕೊಳ್ಳಬಹುದು. ಜತೆಗೆ ಯಾವ ವಲಯಕ್ಕೆ ಆದ್ಯತೆ ನೀಡಬೇಕು ಎನ್ನುವುದು ಸಹ ರಾಜ್ಯಗಳಿಗೆ ತಿಳಿಯಲಿದೆ’ ಎಂದು ಸಲಹೆ ನೀಡಲಾಗಿದೆ.</p>.<p>ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಬಹುತೇಕ ರಾಜ್ಯಗಳು ಸೂಚ್ಯಂಕದಲ್ಲಿ ಸುಧಾರಣೆ ಕಂಡಿವೆ.</p>.<p>ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಿಜಿಐ ಅನ್ನು ಮೊದಲ ಬಾರಿ 2019ರಲ್ಲಿ ಬಿಡುಗಡೆ ಮಾಡಲಾಗಿತ್ತು. 2017–18ನೇ ಶೈಕ್ಷಣಿಕ ವರ್ಷವನ್ನು ಆಧಾರವಾಗಿಟ್ಟುಕೊಂಡು ಈ ಪಿಜಿಐ ವರದಿ ಬಿಡುಗಡೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>