<p><strong>ಇಂಫಾಲ್</strong>: ಮಣಿಪುರದ ನೊನೆಯ್ ಜಿಲ್ಲೆಯಲ್ಲಿ ಶಾಲಾ ಬಸ್ ಉರುಳಿಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರುಮೃತಪಟ್ಟು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಜಧಾನಿ ಇಂಫಾಲ್ನಿಂದ 50 ಕಿ.ಮೀ ದೂರದಲ್ಲಿರುವ ಲಾಂಗ್ಸಾಯಿ ಪ್ರದೇಶದ ಓಲ್ಡ್ ಕಚರ್ ರಸ್ತೆಯಲ್ಲಿ ಈ ಪಘಾತ ಸಂಭವಿಸಿದೆ.</p>.<p>ಥಂಬಲ್ನು ಪ್ರೌಢಶಾಲೆಯ ವಿದ್ಯಾರ್ಥಿಗಳು ವಾರ್ಷಿಕ ಶೈಕ್ಷಣಿಕ ಪ್ರವಾಸಕ್ಕಾಗಿ ಎರಡು ಬಸ್ಗಳಲ್ಲಿ ನೊನೆಯ್ ಜಿಲ್ಲೆಯ ಕೌಂಪುಮ್ ಪ್ರದೇಶಕ್ಕೆ ತೆರಳಿದ್ದರು. ಈ ಪೈಕಿ ವಿದ್ಯಾರ್ಥಿನಿಯರಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಎಸ್ಡಿಆರ್ಎಫ್, ವೈದ್ಯಕೀಯ ತಂಡ ಮತ್ತು ಸ್ಥಳೀಯ ಶಾಸಕರು ಸ್ಥಳಕ್ಕೆ ತೆರಳಿ ರಕ್ಷಣಾ ತಂಡಕ್ಕೆ ಸಹಕರಿಸಿದ್ದಾರೆ. ಬಸ್ನಲ್ಲಿದ್ದ ಎಲ್ಲರ ಸುರಕ್ಷತೆಗೆ ಪ್ರಾರ್ಥಿಸುತ್ತೇನೆ’ಸಿಎಂ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದಾರೆ.</p>.<p>ಬಸ್ ಅಪಘಾತವಾಗಿರುವ ದೃಶ್ಯ ಮತ್ತು ಗಾಯಾಳುಗಳನ್ನು ಸಾಗಿಸುತ್ತಿರುವ ದೃಶ್ಯವಿರುವ ವಿಡಿಯೊವನ್ನು ಅವರು ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong>: ಮಣಿಪುರದ ನೊನೆಯ್ ಜಿಲ್ಲೆಯಲ್ಲಿ ಶಾಲಾ ಬಸ್ ಉರುಳಿಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರುಮೃತಪಟ್ಟು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾಜಧಾನಿ ಇಂಫಾಲ್ನಿಂದ 50 ಕಿ.ಮೀ ದೂರದಲ್ಲಿರುವ ಲಾಂಗ್ಸಾಯಿ ಪ್ರದೇಶದ ಓಲ್ಡ್ ಕಚರ್ ರಸ್ತೆಯಲ್ಲಿ ಈ ಪಘಾತ ಸಂಭವಿಸಿದೆ.</p>.<p>ಥಂಬಲ್ನು ಪ್ರೌಢಶಾಲೆಯ ವಿದ್ಯಾರ್ಥಿಗಳು ವಾರ್ಷಿಕ ಶೈಕ್ಷಣಿಕ ಪ್ರವಾಸಕ್ಕಾಗಿ ಎರಡು ಬಸ್ಗಳಲ್ಲಿ ನೊನೆಯ್ ಜಿಲ್ಲೆಯ ಕೌಂಪುಮ್ ಪ್ರದೇಶಕ್ಕೆ ತೆರಳಿದ್ದರು. ಈ ಪೈಕಿ ವಿದ್ಯಾರ್ಥಿನಿಯರಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಎಸ್ಡಿಆರ್ಎಫ್, ವೈದ್ಯಕೀಯ ತಂಡ ಮತ್ತು ಸ್ಥಳೀಯ ಶಾಸಕರು ಸ್ಥಳಕ್ಕೆ ತೆರಳಿ ರಕ್ಷಣಾ ತಂಡಕ್ಕೆ ಸಹಕರಿಸಿದ್ದಾರೆ. ಬಸ್ನಲ್ಲಿದ್ದ ಎಲ್ಲರ ಸುರಕ್ಷತೆಗೆ ಪ್ರಾರ್ಥಿಸುತ್ತೇನೆ’ಸಿಎಂ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದಾರೆ.</p>.<p>ಬಸ್ ಅಪಘಾತವಾಗಿರುವ ದೃಶ್ಯ ಮತ್ತು ಗಾಯಾಳುಗಳನ್ನು ಸಾಗಿಸುತ್ತಿರುವ ದೃಶ್ಯವಿರುವ ವಿಡಿಯೊವನ್ನು ಅವರು ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>