ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ, ಸೋಮವಾರ ರಾತ್ರಿ ಜಲಾಶಯದ ನೀರಿನ ಒಳಹರಿವು 65,000 ಕ್ಯೂಸೆಕ್ನಿಂದ 80,000 ಕ್ಯೂಸೆಕ್ಗೆ ಏರಿಕೆಯಾಗಿದೆ. ಹೀಗಾಗಿ 16 ಗೇಟುಗಳ ಮೂಲಕ 1.20 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲು ಪಿಡಬ್ಲ್ಯುಡಿ ಇಲಾಖೆ ನಿರ್ಧರಿಸಿದೆ.ಈ ಹಿನ್ನೆಲೆಯಲ್ಲಿ ಜಲಾಶಯದ ಆಸುಪಾಸಿನಲ್ಲಿ ವಾಸಿಸುತ್ತಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಲಹೆ ನೀಡಲಾಗಿದೆ.