<p><strong>ಗುವಾಹಟಿ/ಇಟಾನಗರ/ಅಗರ್ತಲಾ: </strong>ಅಸ್ಸಾಂನಲ್ಲಿ ಪ್ರವಾಹದಿಂದ ಪರಿಸ್ಥಿತಿ ಹದಗೆಟ್ಟಿದ್ದು, ತೊಂದರೆಗೆ ಒಳಗಾದವರ ಸಂಖ್ಯೆ ಗುರುವಾರ 7.18 ಲಕ್ಷಕ್ಕೆ ಏರಿಕೆಯಾಗಿದೆ. ದರ್ರಾಂಗ್ ಜಿಲ್ಲೆಯಲ್ಲಿ ವ್ಯಕ್ತಿಯೊ<br />ಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಪ್ರವಾಹಕ್ಕೆ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.</p>.<p>ಪ್ರಸ್ತುತ ರಾಜ್ಯದಲ್ಲಿ 1,413 ಗ್ರಾಮಗಳು ಜಲಾವೃತವಾಗಿವೆ. ನಾಗಾಂವ್ ಜಿಲ್ಲೆ ಅತಿ ಹೆಚ್ಚು ಹಾನಿಗೊಳಗಾಗಿದ್ದು, ಇಲ್ಲಿನ 2.88 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪ್ರವಾಹದಿಂದ ರಾಜ್ಯದಲ್ಲಿ 46,160 ಹೆಕ್ಟೇರ್ ಬೆಳೆ ಪ್ರದೇಶ ಮುಳುಗಡೆಯಾಗಿದೆ. ಹಲವೆಡೆ ಭೂ ಕುಸಿತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ರಾಜ್ಯದ 14 ಜಿಲ್ಲೆಗಳಲ್ಲಿ 248 ಪರಿಹಾರ ಶಿಬಿರಗಳನ್ನು ನಡೆಸಲಾಗುತ್ತಿದ್ದು, ಅಲ್ಲಿ 6,911 ಮಕ್ಕಳು ಸೇರಿದಂತೆ 48,304 ಜನರು ಆಶ್ರಯ ಪಡೆದಿದ್ದಾರೆ.</p>.<p>ನೆರೆಯ ಅರುಣಾಚಲ ಪ್ರದೇಶದಲ್ಲೂ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಲವೆಡೆ ಭೂ ಕುಸಿತ ಸಂಭವಿಸಿದೆ. ಕೆಲ ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿಯೂ ಉಂಟಾಗಿದೆ. ಇಟಾ<br />ನಗರದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಪ್ರವಾಹದಿಂದಾಗಿ ತ್ರಿಪುರಾದಲ್ಲಿ ರೈಲ್ವೆ ಸೇವೆಗಳು ಸ್ಥಗಿತಗೊಂಡಿರುವ ಕಾರಣ, ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ತುರ್ತು ಸಾಗಣೆಗೆ ಪರ್ಯಾಯ ಮಾರ್ಗಗಳಾದ ಹಲ್ಡಿಯಾ– ಚಿತ್ತಗಾಂಗ್–ಅಖೌರಾ-ಅಗರ್ತಲಾ ಮಾರ್ಗ ಬಳಸಲು ರಾಜ್ಯ ಸರ್ಕಾರ ಯೋಜಿಸಿದೆ.</p>.<p>ಅಸ್ಸಾಂ– ಅಗರ್ತಲಾ ರಾಷ್ಟ್ರೀಯ ಹೆದ್ದಾರಿ ಬುಧವಾರ ವಾಹನ ಸಂಚಾರಕ್ಕೆ ಮುಕ್ತವಾಗಿರುವುದರಿಂದ ಗುವಾಹಟಿ ಮತ್ತು ಸಿಲ್ಚಾರ್ ಕಡೆಯಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬರಲಾರಂಭಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ/ಇಟಾನಗರ/ಅಗರ್ತಲಾ: </strong>ಅಸ್ಸಾಂನಲ್ಲಿ ಪ್ರವಾಹದಿಂದ ಪರಿಸ್ಥಿತಿ ಹದಗೆಟ್ಟಿದ್ದು, ತೊಂದರೆಗೆ ಒಳಗಾದವರ ಸಂಖ್ಯೆ ಗುರುವಾರ 7.18 ಲಕ್ಷಕ್ಕೆ ಏರಿಕೆಯಾಗಿದೆ. ದರ್ರಾಂಗ್ ಜಿಲ್ಲೆಯಲ್ಲಿ ವ್ಯಕ್ತಿಯೊ<br />ಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಪ್ರವಾಹಕ್ಕೆ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.</p>.<p>ಪ್ರಸ್ತುತ ರಾಜ್ಯದಲ್ಲಿ 1,413 ಗ್ರಾಮಗಳು ಜಲಾವೃತವಾಗಿವೆ. ನಾಗಾಂವ್ ಜಿಲ್ಲೆ ಅತಿ ಹೆಚ್ಚು ಹಾನಿಗೊಳಗಾಗಿದ್ದು, ಇಲ್ಲಿನ 2.88 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪ್ರವಾಹದಿಂದ ರಾಜ್ಯದಲ್ಲಿ 46,160 ಹೆಕ್ಟೇರ್ ಬೆಳೆ ಪ್ರದೇಶ ಮುಳುಗಡೆಯಾಗಿದೆ. ಹಲವೆಡೆ ಭೂ ಕುಸಿತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ರಾಜ್ಯದ 14 ಜಿಲ್ಲೆಗಳಲ್ಲಿ 248 ಪರಿಹಾರ ಶಿಬಿರಗಳನ್ನು ನಡೆಸಲಾಗುತ್ತಿದ್ದು, ಅಲ್ಲಿ 6,911 ಮಕ್ಕಳು ಸೇರಿದಂತೆ 48,304 ಜನರು ಆಶ್ರಯ ಪಡೆದಿದ್ದಾರೆ.</p>.<p>ನೆರೆಯ ಅರುಣಾಚಲ ಪ್ರದೇಶದಲ್ಲೂ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಲವೆಡೆ ಭೂ ಕುಸಿತ ಸಂಭವಿಸಿದೆ. ಕೆಲ ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿಯೂ ಉಂಟಾಗಿದೆ. ಇಟಾ<br />ನಗರದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಪ್ರವಾಹದಿಂದಾಗಿ ತ್ರಿಪುರಾದಲ್ಲಿ ರೈಲ್ವೆ ಸೇವೆಗಳು ಸ್ಥಗಿತಗೊಂಡಿರುವ ಕಾರಣ, ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ತುರ್ತು ಸಾಗಣೆಗೆ ಪರ್ಯಾಯ ಮಾರ್ಗಗಳಾದ ಹಲ್ಡಿಯಾ– ಚಿತ್ತಗಾಂಗ್–ಅಖೌರಾ-ಅಗರ್ತಲಾ ಮಾರ್ಗ ಬಳಸಲು ರಾಜ್ಯ ಸರ್ಕಾರ ಯೋಜಿಸಿದೆ.</p>.<p>ಅಸ್ಸಾಂ– ಅಗರ್ತಲಾ ರಾಷ್ಟ್ರೀಯ ಹೆದ್ದಾರಿ ಬುಧವಾರ ವಾಹನ ಸಂಚಾರಕ್ಕೆ ಮುಕ್ತವಾಗಿರುವುದರಿಂದ ಗುವಾಹಟಿ ಮತ್ತು ಸಿಲ್ಚಾರ್ ಕಡೆಯಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬರಲಾರಂಭಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>