<p><strong>ಕನ್ಯಾಕುಮಾರಿ:</strong> ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ದುರಂತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.</p>.<p>ರಾಷ್ಟ್ರೀಯ ವಿಪತ್ತು ನಿರ್ವಹಣಾ ಏಜೆನ್ಸಿ ಪ್ರಕಾರ ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹದಿಂದ ಜೂನ್ ತಿಂಗಳಿನಿಂದ ಇದುವರೆಗೆ 1,391 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 12,722 ಮಂದಿ ಗಾಯಗೊಂಡಿದ್ದಾರೆ. ಜೂನ್ ತಿಂಗಳ ಮಧ್ಯಭಾಗದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ನಂತರ ಹಲವೆಡೆ ಸರಣಿ ಪ್ರವಾಹಗಳು ಸಂಭವಿಸಿವೆ.</p>.<p>'ಪಾಕಿಸ್ತಾನದಲ್ಲಿ ಸಂಭವಿಸಿರುವ ಪ್ರವಾಹ ಭೀಕರವಾಗಿದೆ. ತೊಂದರೆಗೆ ಒಳಗಾದವರನ್ನು ನೆನೆದು ಅನುಕಂಪ ಮೂಡಿದೆ. ದುರಂತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪಗಳು' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗಿನ 'ಭಾರತ್ ಜೋಡೊ ಯಾತ್ರೆ'ಯಲ್ಲಿ ಪಾಲ್ಗೊಂಡಿದ್ದಾರೆ. ಕನ್ಯಾಕುಮಾರಿಯಿಂದ ನಾಗರಕೋಯಿಲ್ ಮೂಲಕ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ತೊಡಗಿದ್ದಾಗ ರಸ್ತೆಯುದ್ದಕ್ಕೂ ಸ್ವಾಗತಿಸಿದ ಭಾರಿ ಜನಸ್ತೋಮವು 'ತಲೈವರ್' ರಾಹುಲ್ ಗಾಂಧಿ ಎಂದು ಘೋಷಣೆಗಳನ್ನು ಮೊಳಗಿಸಿತು.</p>.<p><a href="https://www.prajavani.net/india-news/congress-yatra-970403.html" itemprop="url">ಭಾರತ್ ಜೋಡೊ ಯಾತ್ರೆ: ರಸ್ತೆಯುದ್ದಕ್ಕೂ ರಾಹುಲ್ ಸ್ವಾಗತಕ್ಕೆ ಭಾರಿ ಜನಸ್ತೋಮ </a></p>.<p>ಕಳೆದ ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ಪ್ರವಾಹ ಪರಿಸ್ಥಿತಿ ಕುರಿತಾಗಿ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನ್ಯಾಕುಮಾರಿ:</strong> ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ದುರಂತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.</p>.<p>ರಾಷ್ಟ್ರೀಯ ವಿಪತ್ತು ನಿರ್ವಹಣಾ ಏಜೆನ್ಸಿ ಪ್ರಕಾರ ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹದಿಂದ ಜೂನ್ ತಿಂಗಳಿನಿಂದ ಇದುವರೆಗೆ 1,391 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 12,722 ಮಂದಿ ಗಾಯಗೊಂಡಿದ್ದಾರೆ. ಜೂನ್ ತಿಂಗಳ ಮಧ್ಯಭಾಗದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ನಂತರ ಹಲವೆಡೆ ಸರಣಿ ಪ್ರವಾಹಗಳು ಸಂಭವಿಸಿವೆ.</p>.<p>'ಪಾಕಿಸ್ತಾನದಲ್ಲಿ ಸಂಭವಿಸಿರುವ ಪ್ರವಾಹ ಭೀಕರವಾಗಿದೆ. ತೊಂದರೆಗೆ ಒಳಗಾದವರನ್ನು ನೆನೆದು ಅನುಕಂಪ ಮೂಡಿದೆ. ದುರಂತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪಗಳು' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗಿನ 'ಭಾರತ್ ಜೋಡೊ ಯಾತ್ರೆ'ಯಲ್ಲಿ ಪಾಲ್ಗೊಂಡಿದ್ದಾರೆ. ಕನ್ಯಾಕುಮಾರಿಯಿಂದ ನಾಗರಕೋಯಿಲ್ ಮೂಲಕ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ತೊಡಗಿದ್ದಾಗ ರಸ್ತೆಯುದ್ದಕ್ಕೂ ಸ್ವಾಗತಿಸಿದ ಭಾರಿ ಜನಸ್ತೋಮವು 'ತಲೈವರ್' ರಾಹುಲ್ ಗಾಂಧಿ ಎಂದು ಘೋಷಣೆಗಳನ್ನು ಮೊಳಗಿಸಿತು.</p>.<p><a href="https://www.prajavani.net/india-news/congress-yatra-970403.html" itemprop="url">ಭಾರತ್ ಜೋಡೊ ಯಾತ್ರೆ: ರಸ್ತೆಯುದ್ದಕ್ಕೂ ರಾಹುಲ್ ಸ್ವಾಗತಕ್ಕೆ ಭಾರಿ ಜನಸ್ತೋಮ </a></p>.<p>ಕಳೆದ ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ಪ್ರವಾಹ ಪರಿಸ್ಥಿತಿ ಕುರಿತಾಗಿ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>