ಮೇವು ಹಗರಣದ ಐದನೇ ಪ್ರಕರಣ: ಲಾಲು ಪ್ರಸಾದ್ಗೆ 5 ವರ್ಷ ಜೈಲು, ₹60 ಲಕ್ಷ ದಂಡ

ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಐದನೇ ಪ್ರಕರಣದಲ್ಲಿ (ಡೊರಂಡ ಖಜಾನೆ ಪ್ರಕರಣ) ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ, ₹60 ಲಕ್ಷ ದಂಡ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಫೆಬ್ರುವರಿ 15ರಂದು ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ಪರಿಗಣಿಸಿತ್ತು. ಶಿಕ್ಷೆಯ ಪ್ರಮಾಣವನ್ನು ನಂತರ ಪ್ರಕಟಿಸುವುದಾಗಿ ತಿಳಿಸಿತ್ತು.
ಇದನ್ನೂ ಓದಿ: ಮೇವು ಹಗರಣ| ಡೊರಂಡ ಖಜಾನೆ ಪ್ರಕರಣದಲ್ಲಿ ಲಾಲು ದೋಷಿ: ಸಿಬಿಐ ಕೋರ್ಟ್ ತೀರ್ಪು
ಈ ಪ್ರಕರಣದ ಇತರ 36ರ ಮಂದಿಗೆ ನ್ಯಾಯಾಲಯವು ಈ ಹಿಂದೆಯೇ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಘೋಷಿಸಿದೆ.
Fifth fodder scam case | CBI court in Ranchi sentences RJD leader Lalu Prasad Yadav to 5 years' imprisonment and imposes Rs 60 Lakh fine on him. pic.twitter.com/413701Rt5W
— ANI (@ANI) February 21, 2022
ಅವಿಭಜಿತ ಬಿಹಾರದಲ್ಲಿ ನಡೆದಿದ್ದ ₹950 ಕೋಟಿ ಮೊತ್ತದ ಮೇವು ಹಗರಣದಲ್ಲಿ, ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಖಜಾನೆಗಳಿಂದ ಹಣವನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿತ್ತು. ಡೊರಂಡ ಜಿಲ್ಲಾ ಸರ್ಕಾರಿ ಖಜಾನೆಯಿಂದ ₹139 ಕೋಟಿಗಳನ್ನು ಅಕ್ರಮವಾಗಿ ಪಡೆಯಲಾಗಿತ್ತು.
ಇದೇ ಮೇವು ಹಗರಣದ ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಂದ ಹಣ ಪಡೆದುಕೊಂಡ ನಾಲ್ಕು ಪ್ರಕರಣಗಳಲ್ಲಿ ಲಾಲು ಅವರಿಗೆ ಈಗಾಗಲೇ 14 ವರ್ಷಗಳ ಜೈಲು ಶಿಕ್ಷೆ ಮತ್ತು ಒಟ್ಟು ₹ 60 ಲಕ್ಷ ದಂಡ ವಿಧಿಸಲಾಗಿದೆ. ಈಗ ಶಿಕ್ಷೆ ವಿಧಿಸಿರುವುದು ಐದನೇ ಪ್ರಕರಣವಾಗಿದೆ.
ಇದನ್ನೂ ಓದಿ: ಆರ್ಜೆಡಿ ಅಧ್ಯಕ್ಷ ಸ್ಥಾನ ತ್ಯಜಿಸಲ್ಲವೆಂದ ಲಾಲು ಪ್ರಸಾದ್ ಯಾದವ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.