ಅಸ್ಸಾಂ ಮತ್ತು ಮೇಘಾಲಯದ ನಡುವಿನ ಗಡಿ ವಿವಾದ ಹಲವು ವರ್ಷಗಳಿಂದ ಅಸ್ತಿತ್ವದಲ್ಲಿದೆ. ಎರಡು ದಿನಗಳ ಹಿಂದೆ ಶಿಲ್ಲಾಂಗ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ನಡುವಿನ ಸಭೆಯಲ್ಲಿಯೂ ಈ ವಿಷಯದ ಚರ್ಚೆ ನಡೆದಿತ್ತು. ಅಷ್ಟಾದರೂ, ಸೋಮವಾರ ಘರ್ಷಣೆ ನಡೆದಿದೆ. ರಾಜ್ಯದ ‘ಸಾಂವಿಧಾನಿಕ ಗಡಿ’ರಕ್ಷಣೆ ವೇಳೆ ಅಸ್ಸಾಂನ ಕನಿಷ್ಠ ಐದು ಮಂದಿ ಪೊಲೀಸರು ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಮೂಲಕ, ಈಶಾನ್ಯ ಭಾರತದ ಎರಡು ರಾಜ್ಯಗಳ ನಡುವಿನ ಗಡಿ ವಿವಾದವು ರಕ್ತಸಿಕ್ತ ಸಂಘರ್ಷಕ್ಕೆ ಕಾರಣವಾಗಿದೆ.