ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗೀಕರಣ ಪ್ರಕ್ರಿಯೆಗೆ ಆದ್ಯತೆ ನೀಡಲು ಒತ್ತಾಯ

Last Updated 8 ಜನವರಿ 2021, 20:23 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಬೇಕು ಮತ್ತು ಮೂಲಸೌಕರ್ಯ ಹೂಡಿಕೆಯನ್ನು ಹೆಚ್ಚಿಸಬೇಕು ಎಂದು ಹಿರಿಯ ಆರ್ಥಿಕ ತಜ್ಞರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.

ಶುಕ್ರವಾರ ಪ್ರಧಾನಿ ಜತೆ ನಡೆದ ವರ್ಚುವಲ್‌ ಸಭೆಯಲ್ಲಿ ಭಾಗವಹಿಸಿದ್ದ ತಜ್ಞರು, ಹೂಡಿಕೆದಾರರ ವಿಶ್ವಾಸವನ್ನು ಗಳಿಸುವ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಸರ್ಕಾರಿ ಉದ್ಯಮಗಳ ಖಾಸಗೀಕರಣಕ್ಕೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕು ಎಂದು ತಜ್ಞರು ಸಭೆಯಲ್ಲಿ ಹೇಳಿದ್ದಾರೆ.

ಬಜೆಟ್‌ಗೆ ಮುನ್ನ ನಡೆದ ಈ ಸಭೆಯಲ್ಲಿ ಅರವಿಂದ ಪಣಗರಿಯಾ, ಕೆ.ವಿ ಕಾಮತ್‌, ರಾಕೇಶ್‌ ಮೋಹನ್‌, ಶಂಕರ್‌ ಆಚಾರ್ಯ, ಶೇಖರ್‌ ಶಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT