<p><strong>ನವದೆಹಲಿ</strong>: ಬಲವಂತದ ಮತಾಂತರವು ಗಂಭೀರವಾದ ವಿಚಾರವಾಗಿದ್ದು, 'ಸಂವಿಧಾನ ವಿರೋಧಿ' ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.</p>.<p>ಬೆದರಿಕೆ ಅಥವಾ ಆಮಿಷಗಳನ್ನು ಒಡ್ಡುವ ಮೂಲಕ ಜನರನ್ನು ವಂಚಿಸಿ ಮತಾಂತರಗೊಳಿಸುವುದಕ್ಕೆ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾದ್ಯಾಯ ಅವರು ಸಲ್ಲಿಸಿದ್ದಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತು.</p>.<p>ಈ ವೇಳೆ,ಮತಾಂತರಕ್ಕೆ ಸಂಬಂಧಿಸಿದ ಮಾಹಿತಿಯನ್ನು ರಾಜ್ಯಗಳಿಂದ ಸಂಗ್ರಹಿಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ ಕೇಂದ್ರ ಸರ್ಕಾರವುಸಮಯಾವಕಾಶ ನೀಡುವಂತೆ ಮನವಿ ಮಾಡಿತು.</p>.<p>ನ್ಯಾಯಮೂರ್ತಿ ಎಂ.ಆರ್.ಶಾ ಮತ್ತು ಸಿ.ಟಿ.ರವಿಕುಮಾರ್ ಅವರಿದ್ದ ಪೀಠದೆದುರು ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, 'ನಾವು ರಾಜ್ಯಗಳಿಂದ ಮಾಹಿತಿ ಕಲೆಹಾಕುತ್ತಿದ್ದೇವೆ. ನಮಗೆ ಒಂದು ವಾರದ ಸಮಯ ನೀಡಿ' ಎಂದು ಕೋರಿದರು.</p>.<p>ಅರ್ಜಿಯ ನಿರ್ವಹಣೆ ಕುರಿತು ವಕೀಲರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪೀಠ, 'ಅಷ್ಟು ತಾಂತ್ರಿಕವಾಗಿ ಇರಬೇಡಿ. ಒಂದು ಕಾರಣದಿಂದಾಗಿ ಹಾಗೂ ಪರಿಹಾರ ಕಂಡುಕೊಳ್ಳುವ ಸಲುವಾಗಿ ನಾವು ಇಲ್ಲಿದ್ದೇವೆ. ಸರಿಪಡಿಸುವ ಉದ್ದೇಶದಿಂದ ಸೇರಿದ್ದೇವೆ. ನಿಮ್ಮನ್ನು ವಿರೋಧಿಸುತ್ತಿದ್ದೇವೆ ಎಂದು ಭಾವಿಸಬೇಡಿ. ಇದು ಗಂಭೀರವಾದ ವಿಚಾರ. ಅಂತಿಮವಾಗಿ ಈ ವಿಚಾರವು (ಬಲವಂತದ ಮತಾಂತರವು) ನಮ್ಮ ಸಂವಿಧಾನಕ್ಕೆ ವಿರೋಧಿಯಾದದ್ದು. ಭಾರತದಲ್ಲಿ ಬದುಕುವವರು ಈ ದೇಶದ ಸಂಸ್ಕೃತಿಗೆ ಅನುಸಾರವಾಗಿ ನಡೆಯಬೇಕು' ಎಂದು ಹೇಳಿದೆ.</p>.<p>ಹಾಗೆಯೇ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಲವಂತದ ಮತಾಂತರವು ಗಂಭೀರವಾದ ವಿಚಾರವಾಗಿದ್ದು, 'ಸಂವಿಧಾನ ವಿರೋಧಿ' ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.</p>.<p>ಬೆದರಿಕೆ ಅಥವಾ ಆಮಿಷಗಳನ್ನು ಒಡ್ಡುವ ಮೂಲಕ ಜನರನ್ನು ವಂಚಿಸಿ ಮತಾಂತರಗೊಳಿಸುವುದಕ್ಕೆ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾದ್ಯಾಯ ಅವರು ಸಲ್ಲಿಸಿದ್ದಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತು.</p>.<p>ಈ ವೇಳೆ,ಮತಾಂತರಕ್ಕೆ ಸಂಬಂಧಿಸಿದ ಮಾಹಿತಿಯನ್ನು ರಾಜ್ಯಗಳಿಂದ ಸಂಗ್ರಹಿಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ ಕೇಂದ್ರ ಸರ್ಕಾರವುಸಮಯಾವಕಾಶ ನೀಡುವಂತೆ ಮನವಿ ಮಾಡಿತು.</p>.<p>ನ್ಯಾಯಮೂರ್ತಿ ಎಂ.ಆರ್.ಶಾ ಮತ್ತು ಸಿ.ಟಿ.ರವಿಕುಮಾರ್ ಅವರಿದ್ದ ಪೀಠದೆದುರು ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, 'ನಾವು ರಾಜ್ಯಗಳಿಂದ ಮಾಹಿತಿ ಕಲೆಹಾಕುತ್ತಿದ್ದೇವೆ. ನಮಗೆ ಒಂದು ವಾರದ ಸಮಯ ನೀಡಿ' ಎಂದು ಕೋರಿದರು.</p>.<p>ಅರ್ಜಿಯ ನಿರ್ವಹಣೆ ಕುರಿತು ವಕೀಲರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪೀಠ, 'ಅಷ್ಟು ತಾಂತ್ರಿಕವಾಗಿ ಇರಬೇಡಿ. ಒಂದು ಕಾರಣದಿಂದಾಗಿ ಹಾಗೂ ಪರಿಹಾರ ಕಂಡುಕೊಳ್ಳುವ ಸಲುವಾಗಿ ನಾವು ಇಲ್ಲಿದ್ದೇವೆ. ಸರಿಪಡಿಸುವ ಉದ್ದೇಶದಿಂದ ಸೇರಿದ್ದೇವೆ. ನಿಮ್ಮನ್ನು ವಿರೋಧಿಸುತ್ತಿದ್ದೇವೆ ಎಂದು ಭಾವಿಸಬೇಡಿ. ಇದು ಗಂಭೀರವಾದ ವಿಚಾರ. ಅಂತಿಮವಾಗಿ ಈ ವಿಚಾರವು (ಬಲವಂತದ ಮತಾಂತರವು) ನಮ್ಮ ಸಂವಿಧಾನಕ್ಕೆ ವಿರೋಧಿಯಾದದ್ದು. ಭಾರತದಲ್ಲಿ ಬದುಕುವವರು ಈ ದೇಶದ ಸಂಸ್ಕೃತಿಗೆ ಅನುಸಾರವಾಗಿ ನಡೆಯಬೇಕು' ಎಂದು ಹೇಳಿದೆ.</p>.<p>ಹಾಗೆಯೇ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>