‘ಅರಣ್ಯ ಸಂರಕ್ಷಣಾ ತಿದ್ದುಪಡಿ ಮಸೂದೆಯನ್ನು ಜಂಟಿ ಸಮಿತಿಗೆ ಒಪ್ಪಿಸುವ ನಿರ್ಧಾರವು ಸಂಸದೀಯ ಪ್ರಕ್ರಿಯೆಯನ್ನು ಅಪಮೌಲ್ಯಗೊಳಿಸುವ ಹಾಗೂ ಅದಕ್ಕೆ ಮಸಿ ಬಳಿಯುವ ಪ್ರಯತ್ನ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳುತ್ತಾರೆ. ಆದರೆ, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಂಡಿಸಲಾದ ಮಸೂದೆಗಳ ಪೈಕಿ ಎಷ್ಟು ಮಸೂದೆಗಳನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಜಂಟಿ ಸಮಿತಿಗಳಿಗೆ ಕಳುಹಿಸಿತ್ತು ಎಂಬ ಬಗ್ಗೆ ಅವರು ಅಧ್ಯಯನ ನಡೆಸಲಿ’ ಎಂದು ಟ್ವೀಟ್ನಲ್ಲಿ ಕುಟುಕಿದ್ದಾರೆ.