ಬೆಂಗಳೂರು: ಮಲೇಷ್ಯಾದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವಸಗಿ, ಗರ್ಭಪಾತಕ್ಕೆ ಮಾಡಿಸಿದ ಮತ್ತು ಬೆದರಿಕೆಯೊಡ್ಡಿದ ಆರೋಪದ ಮೇಲೆ ತಮಿಳುನಾಡಿನ ಮಾಜಿ ಸಚಿವ, ಎಐಎಡಿಎಂಕೆ ಮುಖಂಡ ಎಂ.ಮಣಿಕಂಠನ್ ಅವರನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಪ್ರಕರಣದಲ್ಲಿ ಮಣಿಕಂಠನ್ ಅವರಿಗೆ ಮದ್ರಾಸ್ ಹೈಕೋರ್ಟ್ ನಿರೀಕ್ಷಣಾಜಾಮೀನು ನಿರಾಕರಿಸಿತ್ತು. ಅಂದಿನಿಂದಲೂ ಮಣಿಕಂಠನ್ ತಲೆಮರೆಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ಭಾನುವಾರ ವರದಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.