ಮುಂಬೈ: ನಿರ್ಲಕ್ಷ್ಯತನದಿಂದ ಕಾರು ಚಾಲನೆ ಮಾಡಿ ಖಾಸಗಿ ಆಸ್ತಿಗೆ ದಕ್ಕೆ ಮಾಡಿದ್ದರ ಆರೋಪದ ಮೇಲೆಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ಮುಂಬೈ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದರು.
ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.
Former India cricketer Vinod Kambli arrested for ramming his car into gate of his residential society in Mumbai's Bandra, released on bail later: Police
ತಾವು ವಾಸಿಸುವ ಮುಂಬೈನ ಬಾಂದ್ರಾದ ಮನೆಯೊಂದರ ಗೇಟ್ಗೆ ಕಾರ್ ಗುದ್ದಿಸಿ, ನಷ್ಟ ಮಾಡಿದ್ದ ಆರೋಪವನ್ನು ಕಾಂಬ್ಳಿ ಅವರ ಮೇಲೆ ಹೊರಿಸಲಾಗಿತ್ತು. ಅವರನ್ನು ಸದ್ಯಕ್ಕೆ ಜಾಮೀನಿನ ಮಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಸತಿ ಸಮುಚ್ಚಯದವರು ನೀಡಿದ ದೂರಿನ ಆಧಾರದಲ್ಲಿ ಕಾಂಬ್ಳಿ ಅವರ ಮೇಲೆ ಐಪಿಸಿ ಕಲಂ 279, 336 ಹಾಗೂ 427 ಅಡಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನೋದ್ ಕಾಂಬ್ಳಿ ಅವರು ಕ್ರಿಕೆಟ್ ಟೀಂ ಇಂಡಿಯಾದಲ್ಲಿ 1991 ರಿಂದ 2000 ರವರೆಗೆ ಆಡಿದ್ದರು.