‘ನಾಯಕ್ ಮಕ್ಕಳು ಬಿಜೆಪಿ ಸೇರಿದ ಬೆನ್ನಲ್ಲೇ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿತ್ತು. ಅವರು ಕಾಂಗ್ರೆಸ್ ಶಾಸಕರಾಗಿದ್ದುಕೊಂಡು ಮಕ್ಕಳನ್ನು ಬಿಜೆಪಿಗೆ ಸೇರಿಸಿದ್ದಾರೆ. ಎರಡು ದೋಣಿಯಲ್ಲಿ ಕಾಲು ಇಡುವ ಪ್ರಯತ್ನ ಮಾಡಿದ್ದಾರೆ. ಅಂಥ ನಾಯಕರು ಕಾಂಗ್ರೆಸ್ಗೆ ಬೇಕಿಲ್ಲ. ಪಕ್ಷ ನಿಷ್ಠೆ ಹೊಂದಿರುವ ನಾಯಕರು ನಮಗೆ ಬೇಕು’ ಎಂದು ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಛೋಡಂಕರ್ ಪ್ರತಿಕ್ರಿಯಿಸಿದ್ದಾರೆ.