<p><strong>ಶಿಮ್ಲಾ:</strong> ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ವೀರಭದ್ರ ಸಿಂಗ್ ಗುರುವಾರ ಮುಂಜಾನೆ ನಿಧನರಾದರು.</p>.<p>ವೀರಭದ್ರ ಸಿಂಗ್ ಅವರು ಇಂದಿರಾ ಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಐಜಿಎಂಸಿ ಹಿರಿಯ ವೈದ್ಯಕೀಯ ಅಧೀಕ್ಷಕ ಡಾ. ಜನಕ್ ರಾಜ್ ಖಚಿತಪಡಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/pm-modi-carries-out-major-overhaul-of-cabinet-drops-12-ministers-and-gets-sonowal-scindia-rane-in-846127.html" itemprop="url">ಕೇಂದ್ರ ಸಂಪುಟಕ್ಕೆ ಭಾರಿ ಸರ್ಜರಿ: 36 ಮಂದಿ ಹೊಸ ಸೇರ್ಪಡೆ </a></p>.<p>87ವರ್ಷದ ಸಿಂಗ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಏಪ್ರಿಲ್ 13ರಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು.</p>.<p>ಬಳಿಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಈ ನಡುವೆ ಕೆಲವು ದಿನಗಳ ಹಿಂದೆ ಆರೋಗ್ಯ ಹದಗೆಟ್ಟು ಐಜಿಎಂಸಿಗೆ ದಾಖಲಾಗಿದ್ದರು.</p>.<p>ಅವರು ಆರು ಬಾರಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ವೀರಭದ್ರ ಸಿಂಗ್ ಗುರುವಾರ ಮುಂಜಾನೆ ನಿಧನರಾದರು.</p>.<p>ವೀರಭದ್ರ ಸಿಂಗ್ ಅವರು ಇಂದಿರಾ ಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಐಜಿಎಂಸಿ ಹಿರಿಯ ವೈದ್ಯಕೀಯ ಅಧೀಕ್ಷಕ ಡಾ. ಜನಕ್ ರಾಜ್ ಖಚಿತಪಡಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/pm-modi-carries-out-major-overhaul-of-cabinet-drops-12-ministers-and-gets-sonowal-scindia-rane-in-846127.html" itemprop="url">ಕೇಂದ್ರ ಸಂಪುಟಕ್ಕೆ ಭಾರಿ ಸರ್ಜರಿ: 36 ಮಂದಿ ಹೊಸ ಸೇರ್ಪಡೆ </a></p>.<p>87ವರ್ಷದ ಸಿಂಗ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಏಪ್ರಿಲ್ 13ರಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು.</p>.<p>ಬಳಿಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಈ ನಡುವೆ ಕೆಲವು ದಿನಗಳ ಹಿಂದೆ ಆರೋಗ್ಯ ಹದಗೆಟ್ಟು ಐಜಿಎಂಸಿಗೆ ದಾಖಲಾಗಿದ್ದರು.</p>.<p>ಅವರು ಆರು ಬಾರಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>