<p><strong>ಶಿಮ್ಲಾ, ಹಿಮಾಚಲ ಪ್ರದೇಶ: </strong>ಇಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಆರನೇ ಬಾರಿ ಶಾಸಕರಾಗಿರುವ ಜೈ ರಾಮ್ ಠಾಕೂರ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಭಾನುವಾರ ಘೋಷಣೆ ಮಾಡಲಾಗಿದೆ ಎಂದು ವಿರೋಧ ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.</p>.<p>ಠಾಕೂರ್ ಅವರನ್ನು 24 ಮಂದಿ ಶಾಸಕರ ಒಪ್ಪಿಗೆಯ ಮೇರೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಚುನಾವಣಾ ನಿರ್ವಹಣಾ ಸಮಿತಿಯ ಮುಖ್ಯಸ್ಥ ಮಂಗಲ್ ಪಾಂಡೆ ತಿಳಿಸಿದ್ದಾರೆ.</p>.<p>ಬಿಜೆಪಿ ಶಾಸಕರ ಸಭೆಯಲ್ಲಿ ಜೈ ರಾಮ್ ಠಾಕೂರ್, ರಾಜ್ಯ ಬಿಜೆಪಿ ನಾಯಕ ಸುರೇಶ್ ಕಶ್ಯಪ್, ರಾಜ್ಯ ಬಿಜೆಪಿ ಉಸ್ತುವಾರಿ ಮತ್ತು ಸಹ ಉಸ್ತುವಾರಿ ಶಾಸಕ ಅವಿನಾಶ್ ರಾಜ್ ಖನ್ನಾ, ಸಂಜಯ್ ಟಂಡನ್ ಹಾಗೂ ಕೇಂದ್ರ ವೀಕ್ಷಕ ವಿನೋದ್ ತಾವ್ಡಾ ಉಪಸ್ಥಿತರಿದ್ದರು.</p>.<p>ನವೆಂಬರ್ನಲ್ಲಿ ನಡೆದ 68 ಸದಸ್ಯರಿದ್ದ ವಿಧಾನಸಭಾ ಚುನಾವಣೆಯಲ್ಲಿ 40 ಸೀಟುಗಳನ್ನು ಗೆಲ್ಲುವ ಮೂಲಕ ಬಿಜೆಪಿಯ ವಿರುದ್ಧ ಕಾಂಗ್ರೆಸ್ ಜಯ ಸಾಧಿಸಿತ್ತು. ಬಿಜೆಪಿ ಪಕ್ಷ 25 ಸ್ಥಾನಗಳನ್ನು ಗೆದ್ದಿತ್ತು.</p>.<p>ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ಸೆರಜ್ ಪ್ರದೇಶದಿಂದ ಠಾಕೂರ್ ಅವರು ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ, ಹಿಮಾಚಲ ಪ್ರದೇಶ: </strong>ಇಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಆರನೇ ಬಾರಿ ಶಾಸಕರಾಗಿರುವ ಜೈ ರಾಮ್ ಠಾಕೂರ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಭಾನುವಾರ ಘೋಷಣೆ ಮಾಡಲಾಗಿದೆ ಎಂದು ವಿರೋಧ ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.</p>.<p>ಠಾಕೂರ್ ಅವರನ್ನು 24 ಮಂದಿ ಶಾಸಕರ ಒಪ್ಪಿಗೆಯ ಮೇರೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಚುನಾವಣಾ ನಿರ್ವಹಣಾ ಸಮಿತಿಯ ಮುಖ್ಯಸ್ಥ ಮಂಗಲ್ ಪಾಂಡೆ ತಿಳಿಸಿದ್ದಾರೆ.</p>.<p>ಬಿಜೆಪಿ ಶಾಸಕರ ಸಭೆಯಲ್ಲಿ ಜೈ ರಾಮ್ ಠಾಕೂರ್, ರಾಜ್ಯ ಬಿಜೆಪಿ ನಾಯಕ ಸುರೇಶ್ ಕಶ್ಯಪ್, ರಾಜ್ಯ ಬಿಜೆಪಿ ಉಸ್ತುವಾರಿ ಮತ್ತು ಸಹ ಉಸ್ತುವಾರಿ ಶಾಸಕ ಅವಿನಾಶ್ ರಾಜ್ ಖನ್ನಾ, ಸಂಜಯ್ ಟಂಡನ್ ಹಾಗೂ ಕೇಂದ್ರ ವೀಕ್ಷಕ ವಿನೋದ್ ತಾವ್ಡಾ ಉಪಸ್ಥಿತರಿದ್ದರು.</p>.<p>ನವೆಂಬರ್ನಲ್ಲಿ ನಡೆದ 68 ಸದಸ್ಯರಿದ್ದ ವಿಧಾನಸಭಾ ಚುನಾವಣೆಯಲ್ಲಿ 40 ಸೀಟುಗಳನ್ನು ಗೆಲ್ಲುವ ಮೂಲಕ ಬಿಜೆಪಿಯ ವಿರುದ್ಧ ಕಾಂಗ್ರೆಸ್ ಜಯ ಸಾಧಿಸಿತ್ತು. ಬಿಜೆಪಿ ಪಕ್ಷ 25 ಸ್ಥಾನಗಳನ್ನು ಗೆದ್ದಿತ್ತು.</p>.<p>ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ಸೆರಜ್ ಪ್ರದೇಶದಿಂದ ಠಾಕೂರ್ ಅವರು ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>