ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಬಿಜೆಪಿ ಉಸ್ತುವಾರಿ ಪಿ.ಮುರುಳೀಧರ ರಾವ್ ಹಾಗೂ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಎಲ್.ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಅಣ್ಣಾಮಲೈ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಶ್ಲಾಘಿಸಿದರು. ‘ನಾಯಕತ್ವ ಗುಣಗಳಾದ ನಿರ್ಭಯತೆ, ಧೃತಿ, ಜ್ಞಾನ ಹಾಗೂ ಔದಾರ್ಯ ಮನೋಭಾವವನ್ನು ಮೋದಿ ಅವರು ಮೈಗೂಡಿಸಿಕೊಂಡಿದ್ದಾರೆ’ ಎಂದಿದ್ದಾರೆ.