ಮೆಟ್ರೊಮ್ಯಾನ್ ಇ. ಶ್ರೀಧರನ್, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಜೇಕಬ್ ಥಾಮಸ್ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದರು. ಇವರೆಲ್ಲರೂ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ರವೀಂದ್ರನ್ ಹಾಗೂ ವೇಣುಗೋಪಾಲ್ ನಾಯರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಪಕ್ಷದ ಸದಸ್ಯತ್ವವನ್ನು ಪಡೆದರು. ಕೇರಳದಲ್ಲಿ ಅನೇಕ ಉನ್ನತ ವ್ಯಕ್ತಿಗಳು ಶೀಘ್ರದಲ್ಲೇ ಪಕ್ಷಕ್ಕೆ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯ ನಾಯಕತ್ವವು ಈ ಮೊದಲೇ ಘೋಷಿಸಿತ್ತು.