ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಶೈಲಜಾ ಟೀಚರ್‌ಗೆ ಅರಸಿ ಬಂತು ಪ್ರತಿಷ್ಟಿತ ಯೂರೋಪಿಯನ್ ಪ್ರಶಸ್ತಿ

ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿಯ ‘ಓಪನ್ ಸೊಸೈಟಿ‘ ಪ್ರಶಸ್ತಿ
Last Updated 20 ಜೂನ್ 2021, 10:50 IST
ಅಕ್ಷರ ಗಾತ್ರ

ತಿರುವನಂತಪುರಂ: ಕೇರಳ ಸರ್ಕಾರದ ಮಾಜಿ ಆರೋಗ್ಯ ಸಚಿವೆ ಕೆ.ಕೆ ಶೈಲಜಾ (ಶೈಲಜಾ ಟೀಚರ್) ಅವರಿಗೆ ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿಯ ‘ಓಪನ್ ಸೊಸೈಟಿ‘ ಪ್ರಶಸ್ತಿ ಸಂದಿದೆ.

ಶೈಲಜಾ ಅವರು ಸಮುದಾಯ ಆರೋಗ್ಯ ಸೇವೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ, ಇತ್ತೀಚೆಗೆ ವರ್ಚುವಲ್ ಮೂಲಕ ನಡೆದ ಯೂನಿವರ್ಸಿಟಿಯ 30 ನೇ ಪದವಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ.1994 ರಲ್ಲಿ ತತ್ವಶಾಸ್ತ್ರಜ್ಞ ಸರ್ ಕಾರ್ಲ್ ಪಾಪರ್ ಅವರಿಗೆ ‘ಓಪನ್ ಸೊಸೈಟಿ‘ಯ ಮೊದಲ ಪ್ರಶಸ್ತಿ ಸಂದಿತ್ತು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ವಿವಿಯ ಅಧ್ಯಕ್ಷ ಮಿಚೆಲ್ ಇಗ್ನಾಟಿಫ್ ಅವರು, ‘ಶೈಲಜಾ ಟೀಚರ್ ಅವರು ಭಾರತದಲ್ಲಿ ಕೋವಿಡ್ ಸಂದರ್ಭದಲ್ಲಿ ತಮ್ಮ ಸಿಬ್ಬಂದಿಯೊಡನೆ ಸಮರ್ಪಣಾ ಭಾವದಿಂದ ಕೆಲಸ ಮಾಡಿ, ಸಾರ್ವಜನಿಕ ಸೇವೆ ಎಂದರೆ ಏನು? ಎಂಬುದನ್ನು ತೋರಿಸಿಕೊಟ್ಟರು. ಅವರು ಯುವತಿಯರಿಗೆ ಮಾದರಿ‘ ಎಂದರು.

ಈ ವೇಳೆ ಮಾತನಾಡಿದ ಶೈಲಜಾ ಅವರು, ‘ನಾವು ಅನಿರೀಕ್ಷಿತ ಸವಾಲುಗಳನ್ನು ಎದುರಿಸುತ್ತಿದ್ದೇವೆ. ನೀವು ಕಲಿತ ಜ್ಞಾನವನ್ನು ಇತರರೊಂದಿಗೆ ಹಂಚಿಕೊಳ್ಳಿ. ಸಮಾನ ಸಮಾಜ ನಿರ್ಮಾಣ ಮಾಡುವಲ್ಲಿ ಒಬ್ಬ ನಾಯಕನಾಗಿ ಬೆಳೆಯಿರಿ‘ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶೈಲಜಾ ಅವರು ಕೇರಳದಲ್ಲಿ ಕೊರೊನಾ ಸೋಂಕು ವ್ಯಾಪಿಸಿದ್ದಾಗ ಹಲವಾರು ಮಾದರಿ ಎನಿಸುವ ಕೆಲಸಗಳನ್ನು ಮಾಡಿ, ಕೋವಿಡ್ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರು. ಕಳೆದ ಬಾರಿಯ ಎಲ್‌ಡಿಎಫ್‌ ಸರ್ಕಾರದಲ್ಲಿ ಸಚಿವೆ ಆಗಿದ್ದ ಅವರನ್ನು ಈ ಬಾರಿ ಸಿಎಂ ಪಿಣರಾಯಿ ವಿಜಯನ್ ಅವರು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಿಲ್ಲ. ಇದು ವಿವಾದಕ್ಕೆ ಕಾರಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT