<p class="title"><strong>ನವದೆಹಲಿ:</strong> ಕೇಂದ್ರದ ಮಾಜಿ ಕಾನೂನು ಸಚಿವ, ಕಾನೂನು ತಜ್ಞ, 97 ವರ್ಷ ವಯಸ್ಸಿನ ಶಾಂತಿಭೂಷಣ್ ಮಂಗಳವಾರ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. </p>.<p class="title">ಮೊರಾರ್ಜಿ ದೇಸಾಯಿ ನೇತೃತ್ವದ ಸರ್ಕಾರದಲ್ಲಿ 1977 ರಿಂದ 1979ರವರೆಗೂ ಅವರು ಕಾನೂನು ಸಚಿವರಾಗಿದ್ದರು. ಸಾರ್ವಜನಿಕ ಮಹತ್ವದ ಹಲವು ಪ್ರಕರಣಗಳಲ್ಲಿ ವಕಾಲತ್ತು ವಹಿಸಿದ್ದರು.</p>.<p class="title">ಇವರ ಇಬ್ಬರು ಮಕ್ಕಳಾದ ಜಯಂತ್ ಮತ್ತು ಪ್ರಶಾಂತ್ ಭೂಷಣ್ ಅವರೂ ಹೆಸರಾಂತ ವಕೀಲರಾಗಿದ್ದಾರೆ. </p>.<p class="title">ಇತ್ತೀಚಿನವರೆಗೂ ಸಕ್ರಿಯರಾಗಿದ್ದ ಅವರು ರಫೇಲ್ ಯುದ್ಧವಿಮಾನ ಖರೀದಿಗೆ ಸಂಬಂಧಿಸಿದಂತೆ ಕೋರ್ಟ್ನ ಮೇಲ್ವಿಚಾರಣೆಯಲ್ಲಿ ವಿಚಾರಣೆ ನಡೆದಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರವಾಗಿಯೂ ವಾದ ಮಂಡಿಸಿದ್ದರು.</p>.<p>ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧವನ್ನು ಹೇರಿದ್ದ ಅಲಹಾಬಾದ್ ಹೈಕೋರ್ಟ್ನ ಪ್ರಕರಣದಲ್ಲಿ ಅರ್ಜಿದಾರರಾಗಿದ್ದ ರಾಜ್ ನಾರಾಯಣ್ ಪರವಾಗಿ ಶಾಂತಿಭೂಷಣ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕೇಂದ್ರದ ಮಾಜಿ ಕಾನೂನು ಸಚಿವ, ಕಾನೂನು ತಜ್ಞ, 97 ವರ್ಷ ವಯಸ್ಸಿನ ಶಾಂತಿಭೂಷಣ್ ಮಂಗಳವಾರ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. </p>.<p class="title">ಮೊರಾರ್ಜಿ ದೇಸಾಯಿ ನೇತೃತ್ವದ ಸರ್ಕಾರದಲ್ಲಿ 1977 ರಿಂದ 1979ರವರೆಗೂ ಅವರು ಕಾನೂನು ಸಚಿವರಾಗಿದ್ದರು. ಸಾರ್ವಜನಿಕ ಮಹತ್ವದ ಹಲವು ಪ್ರಕರಣಗಳಲ್ಲಿ ವಕಾಲತ್ತು ವಹಿಸಿದ್ದರು.</p>.<p class="title">ಇವರ ಇಬ್ಬರು ಮಕ್ಕಳಾದ ಜಯಂತ್ ಮತ್ತು ಪ್ರಶಾಂತ್ ಭೂಷಣ್ ಅವರೂ ಹೆಸರಾಂತ ವಕೀಲರಾಗಿದ್ದಾರೆ. </p>.<p class="title">ಇತ್ತೀಚಿನವರೆಗೂ ಸಕ್ರಿಯರಾಗಿದ್ದ ಅವರು ರಫೇಲ್ ಯುದ್ಧವಿಮಾನ ಖರೀದಿಗೆ ಸಂಬಂಧಿಸಿದಂತೆ ಕೋರ್ಟ್ನ ಮೇಲ್ವಿಚಾರಣೆಯಲ್ಲಿ ವಿಚಾರಣೆ ನಡೆದಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರವಾಗಿಯೂ ವಾದ ಮಂಡಿಸಿದ್ದರು.</p>.<p>ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧವನ್ನು ಹೇರಿದ್ದ ಅಲಹಾಬಾದ್ ಹೈಕೋರ್ಟ್ನ ಪ್ರಕರಣದಲ್ಲಿ ಅರ್ಜಿದಾರರಾಗಿದ್ದ ರಾಜ್ ನಾರಾಯಣ್ ಪರವಾಗಿ ಶಾಂತಿಭೂಷಣ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>