ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಸದಸ್ಯರಾಗಿ ಟಿಎಂಸಿಯ ಜವಾಹರ್‌ ಸಿರ್ಕಾರ್‌ ಪ್ರಮಾಣ ವಚನ

Last Updated 4 ಆಗಸ್ಟ್ 2021, 7:38 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಾರ ಭಾರತಿಯ ಮಾಜಿ ಸಿಇಒ ಮತ್ತು ಟಿಎಂಸಿ ನಾಯಕ ಜವಾಹರ್ ಸಿರ್ಕಾರ್ ಅವರು ಬುಧವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ಈ ವಾರದ ಆರಂಭದಲ್ಲಿ ಅವರು ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಸಿರ್ಕಾರ್ ಬಂಗಾಳಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯಸಭಾ ಸದಸ್ಯರಾಗಿದ್ದ ದಿನೇಶ್ ತ್ರಿವೇದಿ ಅವರು ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. ಇದರಿಂದ ಖಾಲಿ ಉಳಿದಿದ್ದ ಸ್ಥಾನಕ್ಕೆ ಸಿರ್ಕಾರ್‌ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT