ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ಸಿಂಗ್‌ ನಿಧನ

Last Updated 13 ಸೆಪ್ಟೆಂಬರ್ 2020, 7:28 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ಮಾಜಿ ಸಚಿವ ರಘುವಂಶ್‌ ಪ್ರಸಾದ್ ಸಿಂಗ್‌(74) ಅವರು ಭಾನುವಾರ ನಿಧನರಾದರು. ವಾರದಿಂದ ಅವರು ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜೂನ್‌ನಲ್ಲಿ ಕೋವಿಡ್‌ ಪಾಸಿಟಿವ್‌ ಆಗಿದ್ದ ಬಿಹಾರ ಮುಖಂಡ ರಘುವಂಶ್ ಪ್ರಸಾದ್‌ ಅವರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆದಿದ್ದರು. ಮತ್ತೆ ಕೋವಿಡ್‌ ಗುಣಮುಖರಾದ ನಂತರ ಕಾಣಿಸಿಕೊಂಡಿದ್ದ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಕಳೆದ ಶುಕ್ರವಾರ ವೆಂಟಿಲೇಟರ್‌ ಸಹಕಾರದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು.

ನರೇಗಾ ಯೋಜನೆ ಹಿಂದಿನ ಶಕ್ತಿ ಎಂದೇ ಅವರನ್ನು ಕಾಣಲಾಗುತ್ತದೆ. ಮನಮೋಹನ್‌ ಸಿಂಗ್‌ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಲೋಕಸಭೆಗೆ ದಾಖಲೆಯ ಐದು ಬಾರಿ ಆಯ್ಕೆಯಾಗಿದ್ದ ವೈಶಾಲಿ ಕ್ಷೇತ್ರದಲ್ಲಿ ಕಳೆದ ಎರಡೂ ಚುನಾವಣೆಗಳಲ್ಲಿ (2014 ಮತ್ತು 2019) ಅವರು ಸೋಲು ಕಂಡಿದ್ದರು.

ರಘುವಂಶ್‌ ಪ್ರಸಾದ್ ಅವರು ಇದೇ ಗುರುವಾರ (ಸೆಪ್ಟೆಂಬರ್ 10) ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಪಕ್ಷ ತೊರೆದಿದ್ದರು. ಈ ಸಂಬಂಧ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು.

ಅವರು ಜೂನ್‌ನಲ್ಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಲಾಲು ಪ್ರಸಾದ್‌ ಮನವೊಲಿಸಿದ ಬಳಿಕ ತಮ್ಮ ನಿರ್ಧಾರವನ್ನು ಹಿಂಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT