ತಿರುವನಂತಪುರ: ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ವಯನಾಡ್ ಕ್ಷೇತ್ರದ ಕಾಂಗ್ರೆಸ್ನ ನಾಲ್ವರು ಮುಖಂಡರು ಇತ್ತೀಚೆಗೆ ಪಕ್ಷ ತ್ಯಜಿಸಿದ್ದು ಕಾಂಗ್ರೆಸ್ಗೆ ತಲೆನೋವಾಗಿತ್ತು. ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡ ಪಕ್ಷದ ನಾಯಕರು ಹಾನಿಯನ್ನು ಸರಿಪಡಿಸುವ ಕಾರ್ಯ ಆರಂಭಿಸಿದ್ದು, ಮುನಿಸಿಕೊಂಡಿದ್ದ ಒಬ್ಬ ಮುಖಂಡರನ್ನು ಮರಳಿ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.