ಮೊದಲ ದಿನ ಮಾನವ ಸಂಪನ್ಮೂಲ ನಿರ್ವಹಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಮಾವೇಶವನ್ನು ಉದ್ದೇಶಿಸಿ ಅಕ್ಟೋಬರ್ 27ರಂದು ಮಾತನಾಡಲಿದ್ದಾರೆ. ರಕ್ಷಣಾ ಸಚಿವರ ಭಾಷಣಕ್ಕೆ ಮುಂಚಿತವಾಗಿ ಮೂರೂ ಸಶಸ್ತ್ರಪಡೆಗಳ ಮುಖ್ಯಸ್ಥರು(ಸಿಡಿಎಸ್) ಮತ್ತು ಭೂಸೇನೆ, ನೌಕಾಪಡೆ ಮತ್ತು ವಾಯುಸೇನೆಯಮುಖ್ಯಸ್ಥರು ಕಮಾಂಡರ್ಗಳನ್ನು ಉದ್ದೇಶಿಸಿ ಸಮಾವೇಶದಲ್ಲಿ ಮಾತನಾಡಲಿದ್ದಾರೆ ಎಂದು ಭಾರತೀಯ ಸೇನೆಯು ಪ್ರಕಟಣೆಯಲ್ಲಿ ತಿಳಿಸಿದೆ.