ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರ ಹತ್ಯೆ, ಶರಣಾಗತಿಯಾದ ಮತ್ತೊರ್ವ ಉಗ್ರ

Last Updated 28 ಆಗಸ್ಟ್ 2020, 15:37 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯನ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತ್ಯೆಯಾಗಿದ್ದು, ಅಪರೂಪದ ನಡೆ ಎಂಬಂತೆ ಒಬ್ಬ ಉಗ್ರ ಶರಣಾಗಿದ್ದಾನೆ.

ಉಗ್ರ ಸಂಘಟನೆಯಾದ ಅಲ್‌–ಬದರ್‌ನ ಜಿಲ್ಲಾ ಕಮಾಂಡರ್‌ ಶಕೂರ್‌ ಪರ್ರೆ ಹಾಗೂ ಇತ್ತೀಚೆಗಷ್ಟೇ ಖಾನ್‌ಮೊಹ್‌ ಪ್ರದೇಶದ ಬಿಜೆಪಿಯ ಪಂಚಾಯಿತಿ ಸದಸ್ಯರೊಬ್ಬರನ್ನು ಅಪಹರಿಸಿ ನಂತರ ಹತ್ಯೆ ಮಾಡಿದ್ದ ಉಗ್ರ ಸುಹೈಲ್‌ ಭಟ್‌ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾರೆ. ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇಲೆ ಜಿಲ್ಲೆಯ ಕಿಲೂರಾ ಪ್ರದೇಶದಲ್ಲಿ ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಪ್ರತಿಯಾಗಿ ಭದ್ರತಾ ಪಡೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಉಗ್ರರು ಮೃತಪಟ್ಟಿದ್ದಾರೆ.

‘ಓಬ್ಬ ಉಗ್ರ ಶರಣಾಗಿದ್ದು, ಎರಡು ಎ.ಕೆ. ರೈಫಲ್‌, ಮೂರು ಪಿಸ್ತೂಲ್‌ ವಶಕ್ಕೆ ಪಡೆಯಲಾಗಿದೆ’ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್‌ ರಾಜೇಶ್‌ ಕಾಲಿಯಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT