ಚಂಡೀಗಡ: ಹರಿಯಾಣದ ಜಜ್ಜರ್ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ತ್ಯಾಜ್ಯದ ಟ್ಯಾಂಕ್ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವಿಸಿ ನಾಲ್ವರು ವಲಸೆ ಕಾರ್ಮಿಕರು ಬುಧವಾರ ಮೃತಪಟ್ಟಿದ್ದಾರೆ. ಇಬ್ಬರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಮೃತರೆಲ್ಲರೂ ಉತ್ತರ ಪ್ರದೇಶದವರು. ಆಸ್ಪತ್ರೆಗೆ ದಾಖಲಿಸಿರುವವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ವಾಹನಗಳಿಗಾಗಿ ಅನಿಲದ ಕಿಟ್ ಸಿದ್ಧಪಡಿಸುವ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ’ ಎಂದು ಜಜ್ಜರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಸೀಂ ಅಕ್ರಂ ಹೇಳಿದ್ದಾರೆ.