<p><strong>ನವದೆಹಲಿ:</strong> ‘ಇತ್ತೀಚಿನ ದಿನಗಳಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಹೆಚ್ಚುತ್ತಿದೆ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.</p>.<p>‘ಈ ವರ್ಷದ ಮಾರ್ಚ್ನಲ್ಲಿ ನಡೆದಿದ್ದ ತಬ್ಲಿಗ್ ಜಮಾತ್ ಸಭೆಯಿಂದಾಗಿಯೇ ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿದ್ದಾಗಿ ಕೆಲ ಮಾಧ್ಯಮಗಳು ಬಿಂಬಿಸುತ್ತಿವೆ. ಆ ಮೂಲಕ ಕೋಮು ದ್ವೇಷಹರಡುತ್ತಿವೆ’ ಎಂದು ಆರೋಪಿಸಿ ಜಮೀಯತ್ ಉಲಮಾ–ಐ–ಹಿಂದ್ ಹಾಗೂ ಇತರ ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎಸ್.ಎ. ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರಿದ್ದ ತ್ರಿಸದಸ್ಯ ಪೀಠವು ವಿಡಿಯೊ ಕಾನ್ಫರೆನ್ಸ್ ಮೂಲಕ ಈ ಅರ್ಜಿಯ ವಿಚಾರಣೆ ನಡೆಸಿತು.</p>.<p>ಜಮಾತ್ ಪರ ವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್ ದಾವೆ ‘ಅರ್ಜಿದಾರರು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ತನ್ನ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದೆ’ ಎಂದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಪೀಠವು, ‘ನಿಮಗೆ ಬೇಕಾದ ರೀತಿಯಲ್ಲಿ ವಾದ ಮಂಡಿಸಲು ನೀವು ಸ್ವಾತಂತ್ರ್ಯ ಹೊಂದಿರುವಿರಿ. ಅದೇ ರೀತಿ, ಪ್ರಮಾಣ ಪತ್ರದಲ್ಲಿ ತಮಗೆ ಅನಿಸಿದ್ದನ್ನು ಉಲ್ಲೇಖಿಸಲು ಅವರೂ ಸ್ವತಂತ್ರರಾಗಿದ್ದಾರೆ’ ಎಂದು ಅಭಿಪ್ರಾಯಪಟ್ಟಿತು.</p>.<p>ತಬ್ಲಿಗ್ ಜಮಾತ್ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಕುರಿತು ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಸಲ್ಲಿಸಿರುವ ಪ್ರಮಾಣ ಪತ್ರದ ಬಗ್ಗೆಯೂ ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಹೆಚ್ಚುವರಿ ಕಾರ್ಯದರ್ಶಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಆರೋಪಗಳಿಗೆ ಉತ್ತರಿಸಿಲ್ಲ. ಇದು ಅಸಂಬದ್ಧ ಹಾಗೂ ಜಾರಿಕೆಯ ಪ್ರಮಾಣ ಪತ್ರದಂತೆ ಕಾಣುತ್ತಿದೆ’ ಎಂದು ಪೀಠವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿತು.</p>.<p>‘ಈ ಪ್ರಮಾಣಪತ್ರದಲ್ಲಿ ಅನಗತ್ಯ ವಿಷಯಗಳಿವೆ ಮತ್ತು ಈ ಪ್ರಮಾಣಪತ್ರವನ್ನು ಸಚಿವಾಲಯದ ಕಾರ್ಯದರ್ಶಿ ಸಲ್ಲಿಸಬೇಕಾಗಿತ್ತು. ಇಂತಹ ಪ್ರಕರಣಗಳಲ್ಲಿ ಮಾಧ್ಯಮಗಳು ಪ್ರಚೋದಿತ ವರದಿಗಳನ್ನು ಪ್ರಕಟಿಸದಂತೆ ಈ ಹಿಂದೆ ಯಾವ ರೀತಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎನ್ನುವ ಬಗ್ಗೆ ಕಾರ್ಯದರ್ಶಿ ಅವರೇ ಪ್ರಮಾಣಪತ್ರ ಸಲ್ಲಿಸಬೇಕು’ ಎಂದು ಸೂಚಿಸಿತು.</p>.<p>ಈ ಪ್ರಕರಣದ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಇತ್ತೀಚಿನ ದಿನಗಳಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಹೆಚ್ಚುತ್ತಿದೆ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.</p>.<p>‘ಈ ವರ್ಷದ ಮಾರ್ಚ್ನಲ್ಲಿ ನಡೆದಿದ್ದ ತಬ್ಲಿಗ್ ಜಮಾತ್ ಸಭೆಯಿಂದಾಗಿಯೇ ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿದ್ದಾಗಿ ಕೆಲ ಮಾಧ್ಯಮಗಳು ಬಿಂಬಿಸುತ್ತಿವೆ. ಆ ಮೂಲಕ ಕೋಮು ದ್ವೇಷಹರಡುತ್ತಿವೆ’ ಎಂದು ಆರೋಪಿಸಿ ಜಮೀಯತ್ ಉಲಮಾ–ಐ–ಹಿಂದ್ ಹಾಗೂ ಇತರ ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎಸ್.ಎ. ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರಿದ್ದ ತ್ರಿಸದಸ್ಯ ಪೀಠವು ವಿಡಿಯೊ ಕಾನ್ಫರೆನ್ಸ್ ಮೂಲಕ ಈ ಅರ್ಜಿಯ ವಿಚಾರಣೆ ನಡೆಸಿತು.</p>.<p>ಜಮಾತ್ ಪರ ವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್ ದಾವೆ ‘ಅರ್ಜಿದಾರರು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ತನ್ನ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದೆ’ ಎಂದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಪೀಠವು, ‘ನಿಮಗೆ ಬೇಕಾದ ರೀತಿಯಲ್ಲಿ ವಾದ ಮಂಡಿಸಲು ನೀವು ಸ್ವಾತಂತ್ರ್ಯ ಹೊಂದಿರುವಿರಿ. ಅದೇ ರೀತಿ, ಪ್ರಮಾಣ ಪತ್ರದಲ್ಲಿ ತಮಗೆ ಅನಿಸಿದ್ದನ್ನು ಉಲ್ಲೇಖಿಸಲು ಅವರೂ ಸ್ವತಂತ್ರರಾಗಿದ್ದಾರೆ’ ಎಂದು ಅಭಿಪ್ರಾಯಪಟ್ಟಿತು.</p>.<p>ತಬ್ಲಿಗ್ ಜಮಾತ್ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಕುರಿತು ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಸಲ್ಲಿಸಿರುವ ಪ್ರಮಾಣ ಪತ್ರದ ಬಗ್ಗೆಯೂ ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಹೆಚ್ಚುವರಿ ಕಾರ್ಯದರ್ಶಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಆರೋಪಗಳಿಗೆ ಉತ್ತರಿಸಿಲ್ಲ. ಇದು ಅಸಂಬದ್ಧ ಹಾಗೂ ಜಾರಿಕೆಯ ಪ್ರಮಾಣ ಪತ್ರದಂತೆ ಕಾಣುತ್ತಿದೆ’ ಎಂದು ಪೀಠವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿತು.</p>.<p>‘ಈ ಪ್ರಮಾಣಪತ್ರದಲ್ಲಿ ಅನಗತ್ಯ ವಿಷಯಗಳಿವೆ ಮತ್ತು ಈ ಪ್ರಮಾಣಪತ್ರವನ್ನು ಸಚಿವಾಲಯದ ಕಾರ್ಯದರ್ಶಿ ಸಲ್ಲಿಸಬೇಕಾಗಿತ್ತು. ಇಂತಹ ಪ್ರಕರಣಗಳಲ್ಲಿ ಮಾಧ್ಯಮಗಳು ಪ್ರಚೋದಿತ ವರದಿಗಳನ್ನು ಪ್ರಕಟಿಸದಂತೆ ಈ ಹಿಂದೆ ಯಾವ ರೀತಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎನ್ನುವ ಬಗ್ಗೆ ಕಾರ್ಯದರ್ಶಿ ಅವರೇ ಪ್ರಮಾಣಪತ್ರ ಸಲ್ಲಿಸಬೇಕು’ ಎಂದು ಸೂಚಿಸಿತು.</p>.<p>ಈ ಪ್ರಕರಣದ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>