ಈ ಪೀಠದಲ್ಲಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಹೇಮಂತ್ ಗುಪ್ತಾ, ಸೂರ್ಯಕಾಂತ್, ಎಂ.ಎಂ. ಸುಂದ್ರೇಶ್ ಹಾಗೂ ಸುಧಾಂಶು ಧೂಲಿಯಾ ಅವರಿದ್ದರು. ಆದರೆ, ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಹೇಮಂತ್ ಗುಪ್ತಾ ಅವರು ಅದೇ ವರ್ಷ ಸೆ.23 ಹಾಗೂ ಅ.6ರಂದು ಕ್ರಮವಾಗಿ ನಿವೃತ್ತಿ ಹೊಂದಿದರು. ಸುಮಾರು 8 ಅರ್ಜಿಗಳನ್ನು ಈ ಪೀಠವು ವಿಚಾರಣೆ ನಡೆಸುತ್ತಿತ್ತು. ಇಬ್ಬರು ನ್ಯಾಯಮೂರ್ತಿಗಳು ನಿವೃತ್ತಿ ಹೊಂದಿದ್ದರಿಂದ ಈ ಅರ್ಜಿಗಳ ವಿಚಾರಣೆಯು ಅರ್ಧಕ್ಕೆ ನಿಂತಿತ್ತು.