<p class="title"><strong>ನವದೆಹಲಿ: </strong>ಬಹುಪತ್ನಿತ್ವ ಹಾಗೂ ನಿಖಾ ಹಲಾಲ್ಗೆ ಇರುವ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಗಾಗಿ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ರಚಿಸುವುದಾಗಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಗುರುವಾರ ತಿಳಿಸಿದರು.</p>.<p>ಬಹುಪತ್ನಿತ್ವ ಹಾಗೂ ನಿಖಾ ಹಲಾಲ್ಗೆ ಅವಕಾಶ ನೀಡುವ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 494 ಅನ್ನು ರದ್ದು ಮಾಡಬೇಕು, ಈ ಎರಡನ್ನೂ ಅಸಾಂವಿಧಾನಿಕ ಹಾಗೂ ಅಕ್ರಮ ಎಂದು ಘೋಷಿಸಬೇಕು ಎಂದು ವಕೀಲ ಅಶ್ವಿನ್ ಉಪಾಧ್ಯಾಯ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p>.<p>ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆಯನ್ನು ನಡೆಸಿತು. ‘ನಾನು ಈ ಅರ್ಜಿಯನ್ನು ಪರಿಗಣನೆಗೆ ತೆಗೆದುಕೊಳ್ಳುತ್ತೇನೆ. ಮತ್ತು ಇದಕ್ಕಾಗಿ ಸಾಂವಿಧಾನಿಕ ಪೀಠವನ್ನೂ ರಚಿಸುತ್ತೇನೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಹೇಳಿದರು.</p>.<p>ಇದೇ ಅರ್ಜಿಯ ಸಂಬಂಧ ಕಳೆದ ವರ್ಷ ಆಗಸ್ಟ್ 30ರಂದು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗಕ್ಕೆ ನೋಟಿಸ್ ನೀಡಿ, ಅರ್ಜಿಯ ಸಂಬಂಧ ಪ್ರತಿಕ್ರಿಯೆ ನೀಡುವಂತೆ ತಿಳಿಸಿತ್ತು.</p>.<p>ಈ ಪೀಠದಲ್ಲಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಹೇಮಂತ್ ಗುಪ್ತಾ, ಸೂರ್ಯಕಾಂತ್, ಎಂ.ಎಂ. ಸುಂದ್ರೇಶ್ ಹಾಗೂ ಸುಧಾಂಶು ಧೂಲಿಯಾ ಅವರಿದ್ದರು. ಆದರೆ, ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಹೇಮಂತ್ ಗುಪ್ತಾ ಅವರು ಅದೇ ವರ್ಷ ಸೆ.23 ಹಾಗೂ ಅ.6ರಂದು ಕ್ರಮವಾಗಿ ನಿವೃತ್ತಿ ಹೊಂದಿದರು. ಸುಮಾರು 8 ಅರ್ಜಿಗಳನ್ನು ಈ ಪೀಠವು ವಿಚಾರಣೆ ನಡೆಸುತ್ತಿತ್ತು. ಇಬ್ಬರು ನ್ಯಾಯಮೂರ್ತಿಗಳು ನಿವೃತ್ತಿ ಹೊಂದಿದ್ದರಿಂದ ಈ ಅರ್ಜಿಗಳ ವಿಚಾರಣೆಯು ಅರ್ಧಕ್ಕೆ ನಿಂತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಬಹುಪತ್ನಿತ್ವ ಹಾಗೂ ನಿಖಾ ಹಲಾಲ್ಗೆ ಇರುವ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಗಾಗಿ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ರಚಿಸುವುದಾಗಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಗುರುವಾರ ತಿಳಿಸಿದರು.</p>.<p>ಬಹುಪತ್ನಿತ್ವ ಹಾಗೂ ನಿಖಾ ಹಲಾಲ್ಗೆ ಅವಕಾಶ ನೀಡುವ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 494 ಅನ್ನು ರದ್ದು ಮಾಡಬೇಕು, ಈ ಎರಡನ್ನೂ ಅಸಾಂವಿಧಾನಿಕ ಹಾಗೂ ಅಕ್ರಮ ಎಂದು ಘೋಷಿಸಬೇಕು ಎಂದು ವಕೀಲ ಅಶ್ವಿನ್ ಉಪಾಧ್ಯಾಯ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p>.<p>ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆಯನ್ನು ನಡೆಸಿತು. ‘ನಾನು ಈ ಅರ್ಜಿಯನ್ನು ಪರಿಗಣನೆಗೆ ತೆಗೆದುಕೊಳ್ಳುತ್ತೇನೆ. ಮತ್ತು ಇದಕ್ಕಾಗಿ ಸಾಂವಿಧಾನಿಕ ಪೀಠವನ್ನೂ ರಚಿಸುತ್ತೇನೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಹೇಳಿದರು.</p>.<p>ಇದೇ ಅರ್ಜಿಯ ಸಂಬಂಧ ಕಳೆದ ವರ್ಷ ಆಗಸ್ಟ್ 30ರಂದು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗಕ್ಕೆ ನೋಟಿಸ್ ನೀಡಿ, ಅರ್ಜಿಯ ಸಂಬಂಧ ಪ್ರತಿಕ್ರಿಯೆ ನೀಡುವಂತೆ ತಿಳಿಸಿತ್ತು.</p>.<p>ಈ ಪೀಠದಲ್ಲಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಹೇಮಂತ್ ಗುಪ್ತಾ, ಸೂರ್ಯಕಾಂತ್, ಎಂ.ಎಂ. ಸುಂದ್ರೇಶ್ ಹಾಗೂ ಸುಧಾಂಶು ಧೂಲಿಯಾ ಅವರಿದ್ದರು. ಆದರೆ, ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಹೇಮಂತ್ ಗುಪ್ತಾ ಅವರು ಅದೇ ವರ್ಷ ಸೆ.23 ಹಾಗೂ ಅ.6ರಂದು ಕ್ರಮವಾಗಿ ನಿವೃತ್ತಿ ಹೊಂದಿದರು. ಸುಮಾರು 8 ಅರ್ಜಿಗಳನ್ನು ಈ ಪೀಠವು ವಿಚಾರಣೆ ನಡೆಸುತ್ತಿತ್ತು. ಇಬ್ಬರು ನ್ಯಾಯಮೂರ್ತಿಗಳು ನಿವೃತ್ತಿ ಹೊಂದಿದ್ದರಿಂದ ಈ ಅರ್ಜಿಗಳ ವಿಚಾರಣೆಯು ಅರ್ಧಕ್ಕೆ ನಿಂತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>